Advertisement

ಕಲ್ಬುರ್ಗಿ ಆಯ್ತು, ಈಗ ಮಂಗಳೂರಿನಲ್ಲಿ ನರೇಂದ್ರ ನಾಯಕ್ ಹತ್ಯೆಗೆ ಯತ್ನ?

12:11 PM Mar 16, 2017 | Sharanya Alva |

ಮಂಗಳೂರು: ಖ್ಯಾತ ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಹತ್ಯೆಗೆ ಯತ್ನ ನಡೆಸಿರುವ ಘಟನೆ ಮಂಗಳೂರಿನ ಉರ್ವದಲ್ಲಿ ನಡೆದಿದೆ ಎಂದು ಮಾಧ್ಯಮಗಳ ವರದಿ ತಿಳಿಸಿದೆ.

Advertisement

ಕಾರಿನಲ್ಲಿ ತೆರಳುತ್ತಿದ್ದ ವೇಳೆ ಇಬ್ಬರು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. ಸರ್…ಸರ್..ಟೈರ್ ಪಂಚರ್ ಆಗಿದೆ ಎಂದು ಕಾರು ನಿಲ್ಲಿಸಲು ಪ್ರಯತ್ನಿಸಿದ್ದರು. ಅಪಾಯದ ಮುನ್ಸೂಚನೆ ಅರಿತು ಪ್ರೊ.ನಾಯಕ್ ಅವರು ಕಾರು ನಿಲ್ಲಿಸದೆ ಪ್ರಯಾಣಿಸಿದ್ದರು.

ವಿನಾಯಕ ಬಾಳಿಗ ಹತ್ಯೆ ಪ್ರಕರಣದ ಹೋರಾಟಗಾರರಾಗಿರುವ ನರೇಂದ್ರ ನಾಯಕ್ ಮೇಲೆ ದಾಳಿ ನಡೆಯುವ ಮುನ್ನೆಚ್ಚರಿಕೆಯಿಂದಾಗಿ ಓರ್ವ ಗನ್ ಮ್ಯಾನ್ ಅನ್ನು ಪೊಲೀಸ್ ಇಲಾಖೆ ಒದಗಿಸಿತ್ತು.

ತನ್ನ ಮೇಲೆ ದಾಳಿಗೆ ಯತ್ನ ನಡೆಸಿರುವುದಾಗಿ ಆರೋಪಿಸಿ ನರೇಂದ್ರ ನಾಯ್ಕ್ ಅವರು ಇಂದು ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಿನ್ನೆ ಗನ್ ಮ್ಯಾನ್ ಇಲ್ಲದೆ ಮನೆಯಿಂದ ಹೊರ ಬಂದಿದ್ದಾಗ, ನರೇಂದ್ರ ನಾಯ್ಕ್ ಅವರ ಕಾರನ್ನು ಇಬ್ಬರು ಹಿಂಬಾಲಿಸಿಕೊಂಡು ಬಂದಿರುವುದಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿ ವಿಚಾರವಾದಿ ಎಂಎಂ ಕಲ್ಬುರ್ಗಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ನೆನಪಿನಿಂದ ಮಾಸುವ ಮುನ್ನವೇ ಇದೀಗ ಮತ್ತೊಬ್ಬ ವಿಚಾರವಾದಿ ನರೇಂದ್ರ ನಾಯಕ್ ಅವರನ್ನು ಟಾರ್ಗೆಟ್ ಮಾಡಲಾಗಿದೆ ಎಂದು ವರದಿ ವಿವರಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next