Advertisement

ನಾಸಿರ್‌ ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮ ರದ್ದು

07:10 AM Dec 22, 2018 | Karthik A |

ಅಜ್ಮೇರ್‌: ಬಾಲಿವುಡ್‌ ನಟ ನಾಸಿರುದ್ದೀನ್‌ ಶಾ ಪಾಲ್ಗೊಳ್ಳಬೇಕಿದ್ದ ಅಜ್ಮೇರ್‌ ಸಾಹಿತ್ಯೋತ್ಸವದ ಕಾರ್ಯಕ್ರಮವೊಂದನ್ನು ಆಯೋಜಕರು ಕೊನೇ ಕ್ಷಣದಲ್ಲಿ ರದ್ದು ಮಾಡಿದ್ದಾರೆ. ಬುಲಂದ್‌ಶಹರ್‌ ಘಟನೆ ಕುರಿತು ನಾಸಿರುದ್ದೀನ್‌ ನೀಡಿದ್ದ ಹೇಳಿಕೆ ಖಂಡಿಸಿ ಬಲಪಂಥೀಯ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇನ್‌ಸ್ಪೆಕ್ಟರ್‌ವೊಬ್ಬರ ಹತ್ಯೆಗಿಂತಲೂ ಹಸುವಿನ ಸಾವಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಎಂದು ನಾಸಿರ್‌ ಹೇಳಿಕೆ ನೀಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next