Advertisement

Rajya Sabha ನಾಸಿರ್‌ ಹುಸೇನ್‌ ಪ್ರಮಾಣ ವಚನ ಸ್ವೀಕರಿಸಬಾರದು: ವಿಜಯೇಂದ್ರ

07:12 PM Mar 05, 2024 | Team Udayavani |

ಬೆಳಗಾವಿ:ವಿಧಾನಸೌಧದಲ್ಲಿ ಪಾಕಿಸ್ತಾನ್‌ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆ ಮುಗಿಯುವವರೆಗೆ ರಾಜ್ಯಸಭಾ ಸದಸ್ಯರಾಗಿ ನಾಸೀರ್‌ ಹುಸೇನ್‌ ಪ್ರಮಾಣ ವಚನ ಸ್ವೀಕರಿಸಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಸಂಬಂಧ ಬಿಜೆಪಿ ವತಿಯಿಂದ ಉಪರಾಷ್ಟ್ರಪತಿಗಳಿಗೆ ಪತ್ರ ಬರೆದು ಸಂಪೂರ್ಣ ತನಿಖೆ ಮುಗಿಯವವರೆಗೆ ನಾಸೀರ್‌ ಹುಸೇನ್‌ಗೆ ಪ್ರಮಾಣ ವಚನ ಬೋಧಿಸಬಾರದು ಎಂದು ಮನವಿ ಮಾಡಿಕೊಳ್ಳಲಾಗುವುದು. ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಸಭಾ ಸದಸ್ಯ ನಾಸೀರ್‌ ಹುಸೇನ್‌ ಅವರನ್ನು ಸಹ ಆರೋಪಿ ಎಂದು ಪರಿಗಣಿಸಿ ಪ್ರಕರಣ ದಾಖಲಿಸಬೇಕು. ಯಾವುದೇ ಕಾರಣಕ್ಕೂ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಮಾಡಿಕೊಡಬಾರದು.

ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್‌ ಪಕ್ಷ ನಿಜವಾಗಿಯೂ ಪ್ರಾಮಾಣಿಕವಾಗಿದ್ದರೆ, ದೇಶದ ಜನರ ಬಗ್ಗೆ ಕಾಳಜಿ ಇದ್ದರೆ ಇಂತಹ ದೇಶದ್ರೋಹಿಗಳ ರಕ್ಷಣೆಗೆ ನಿಲ್ಲಬಾರದು. ತನಿಖೆ ವಿಷಯದಲ್ಲಿ ಪೊಲೀಸರ ಮೇಲೆ ಒತ್ತಡ ಹಾಕಬಾರದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next