Advertisement

ವಿ.ರಾಘವೇಂದ್ರ ಅವರಿಗೆ ರಾಷ್ಟ್ರೀಯ ಪ್ರಶಸ್ತಿ

11:29 PM Jan 24, 2020 | Team Udayavani |

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ “ವಿದ್ಯುನ್ಮಾನ ಮತ ಯಂತ್ರ’ (ಇವಿಎಂ)ಗಳ ಸಮರ್ಥ ನಿರ್ವಹಣೆ ಹಾಗೂ ಅದರ ಕುರಿತ ತರಬೇತಿ ವಿಚಾರದಲ್ಲಿ ಉತ್ತಮ ಸೇವೆ ಸಲ್ಲಿಸಿದ ರಾಜ್ಯದ ಜಂಟಿ ಮುಖ್ಯ ಚುನಾವಣಾಧಿಕಾರಿ ವಿ. ರಾಘವೇಂದ್ರ ಅವರಿಗೆ 2019ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

Advertisement

ಭಾರತ ಚುನಾವಣಾ ಆಯೋಗವು “ರಾಷ್ಟ್ರೀಯ ಮತದಾರರ ದಿನಾಚರಣೆ’ ಅಂಗವಾಗಿ ಜ.25ರಂದು ದೆಹಲಿಯ ಕಂಟೋನ್ಮೆಂಟ್‌ನ ಝೋರಾವರ್‌ ಸಭಾಂಗಣದ ಮಾಣಿಕ್‌ಷಾ ಸೆಂಟರ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next