Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯ ಪೂರ್ವದಲ್ಲೇ ಈ ಭಾಗದ ಅಂಧ, ಅನಾಥರ ಏಳ್ಗೆಗಾಗಿ ಹಾನಗಲ್ಲ ಶ್ರೀ ಕುಮಾರೇಶ್ವರ ಸ್ವಾಮಿಗಳ ಕೃಪಾಶೀರ್ವಾದದಿಂದ ಪಂ|ಪಂಚಾಕ್ಷರಿ ಗವಾಯಿಗಳು 1914ರಲ್ಲಿ ವೀರೇಶ್ವರ ಪುಣ್ಯಾಶ್ರಮ ಸ್ಥಾಪಿಸಿದರು.
Related Articles
Advertisement
ಪಂ|ಪಂಚಾಕ್ಷರಿ ಗವಾಯಿಗಳ ಜನ್ಮದಿನವಾದ ಫೆ.2ರಂದು ಈ ಪ್ರಶಸ್ತಿ ನೀಡಲು ಉದ್ದೇಶಿಸಿದ್ದು, 10 ಲಕ್ಷ ರೂ. ನಗದು ಸಹಿತ ಪ್ರಶಸ್ತಿ ಪತ್ರ, ಸ್ಮರಣಿಕೆಯನ್ನು ಹೊಂದಿರುತ್ತದೆ. 25ರಿಂದ 30 ವರ್ಷಗಳಿಗೂ ಹೆಚ್ಚು ಕಾಲ ದಕ್ಷಿಣ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಹಿರಿಯ ಕಲಾವಿದರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆಗೂ ಸರ್ಕಾರ ಉಪ ಸಮಿತಿ ರಚಿಸಲಿದೆ ಎಂದು ಆದೇಶ ಪತ್ರದಲ್ಲಿ ಉಲ್ಲೇಖೀಸಲಾಗಿದೆ. ಇದರಿಂದ ಪ್ರಶಸ್ತಿ ಆಯ್ಕೆಯೂ ಪಾರದರ್ಶಕವಾಗಲಿದ್ದು, ಪ್ರಶಸ್ತಿಯ ಗೌರವವೂ ಹೆಚ್ಚಲಿದೆ ಎಂದರು.
ಪಂ|ಪಂಚಾಕ್ಷರಿ ಗವಾಯಿಗಳ ಹೆಸರಲ್ಲಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆಯಿಂದ ಪುಣ್ಯಾಶ್ರಮದ ಭಕ್ತರು ಹಾಗೂ ದೇಶ, ವಿದೇಶಗಳಲ್ಲಿರುವ ಸಂಗೀತ ಕಲಾವಿದರಲ್ಲಿ ಸಂಭ್ರಮ ಮೂಡಿದೆ. ಅದರಂತೆ ನಡೆದಾಡುವ ದೇವರು, ಅಂಧ, ಅನಾಥರ ಆಶಾಕಿರಣವಾಗಿದ್ದ ಪಂ|ಪುಟ್ಟರಾಜ ಕವಿ ಗವಾಯಿಗಳಿಗೆ ಭಾರತ ರತ್ನ ನೀಡಬೇಕು ಎಂಬುದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಆದಷ್ಟು ಬೇಗ ಕೇಂದ್ರ ಸರ್ಕಾರ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಪಂ|ಸದಾಶಿವ ಪಾಟೀಲ, ಪಂ|ಹೇಮರಾಜ ಶಾಸ್ತ್ರೀ ಹೇಡಿಗೊಂಡ, ನಿಜಗುಣಿ ಗವಾಯಿಗಳು ದಿಂಡವಾರ, ಶಿವಲಿಂಗ ಶಾಸ್ತ್ರೀ ಸಿದ್ದಾಪೂರ ಮತ್ತಿತರರು ಉಪಸ್ಥಿತರಿದ್ದರು.