Advertisement

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

01:15 PM Sep 18, 2024 | Team Udayavani |

ಬೆಂಗಳೂರು: ಸ್ಯಾಂಡಲ್‌ ವುಡ್‌ ನಲ್ಲಿ ಚಿತ್ರಕಥೆಗಾರರಾಗಿ, ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕರಲ್ಲಿ ಒಬ್ಬರಾಗಿ ಹೆಸರು ಮಾಡಿದ್ದ ಕೋಡಳ್ಳಿ ಶಿವರಾಮ್‌(75ವರ್ಷ) ಅವರು ನಿಧನ ಹೊಂದಿರುವುದಾಗಿ ಮೂಲಗಳು ತಿಳಿಸಿವೆ.

Advertisement

1978ರಲ್ಲಿ ತೆರೆಕಂಡಿದ್ದ ಗ್ರಹಣ ಸಿನಿಮಾವನ್ನು ಟಿಎಸ್‌ ನಾಗಾಭರಣ ನಿರ್ದೇಶಿಸಿದ್ದರು. ಈ ಸಿನಿಮಾಕ್ಕೆ ಕೋಡಳ್ಳಿ ಶಿವರಾಮ್‌ ಚಿತ್ರಕಥೆ ಬರೆದಿದ್ದು, ಚಿತ್ರಕ್ಕೆ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ಸಿಕ್ಕಿತ್ತು.

ಕೋಡಳ್ಳಿ ಶಿವರಾಮ್‌ ಅವರು ಕನ್ನಡ ಚಿತ್ರರಂಗದಲ್ಲಿ ಚಿತ್ರ ನಿರ್ದೇಶಿಸಿ, ನಿರ್ಮಾಣ ಮಾಡುವ ಮೂಲಕ ಹೆಸರು ಪಡೆದಿದ್ದರು. ಅವಿವಾಹಿತರಾಗಿದ್ದ ಕೋಡಳ್ಳಿ ಬೆಂಗಳೂರಿನ ಹನುಮಂತ ನಗರದಲ್ಲಿ ಏಕಾಂಗಿಯಾಗಿ ವಾಸವಾಗಿದ್ದರು.

ಕೋಡಳ್ಳಿ ಸೆ.17ರಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದರು. ಆದರೆ ಕೋಡಳ್ಳಿ ನಿಧನದ ಸುದ್ದಿ ಕುಟುಂಬ ಸದಸ್ಯರಿಗೆ ಮಂಗಳವಾರ ರಾತ್ರಿ ವೇಳೆ ತಿಳಿದು ಬಂದಿರುವುದಾಗಿ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next