Advertisement

ಶ್ರೀಗಳ ಅಂತಿಮ ದರ್ಶನಕ್ಕೆ ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಿದ್ದತೆ

09:55 AM Dec 30, 2019 | keerthan |

ಬೆಂಗಳೂರು: ಉಡುಪಿ ಪೇಜಾವರ ಮಠದ ಹಿರಿಯ ಯತಿ ವಿಶ್ವೇಶ ತೀರ್ಥ ಸ್ವಾಮೀಜಿಯವರು ಇಂದು ಹರಿಪಾದ ಸೇರಿದ್ದು, ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.

Advertisement

ಸಂಸದರಾದ ಪಿ.ಸಿ.ಮೋಹನ್, ತೇಜಸ್ವಸೂರ್ಯ, ಶಾಸಕರಾದ ರವಿ ಸುಬ್ರಮಣ್ಯ, ಉದಯ್ ಗರುಡಾಚಾರ್ ಅವರು ಸ್ಥಳಕ್ಕೆ ಆಗಮಿಸಿ ಸಿದ್ದತೆಯ ಪರಿಶೀಲನೆ ನಡೆಸಲಾಗಿದೆ.

ಮಧ್ಯಾಹ್ನ 1:30 ಕ್ಕೆ ಶ್ರೀಗಳ ಪಾರ್ಥಿವ ಶರೀರ ಎಚ್.ಎ.ಎಲ್.ಗೆ ಬರುತ್ತದೆ. ಅಲ್ಲಿಂದ ನ್ಯಾಷನಲ್ ಕಾಲೇಜ್ ಗೆ ತರಲಾಗುತ್ತದೆ. ಟ್ರಾಫಿಕ್ ಮುಕ್ತ ಮಾರ್ಗದಲ್ಲಿ ಪ್ರಾರ್ಥಿವ ಶರೀರರವನ್ನ ತರಲಾಗುತ್ತದೆ. 2:30 ಕ್ಕೆ ನ್ಯಾಷನಲ್ ಕಾಲೇಜ್ ಮೈದಾನಕ್ಕೆ ಶ್ರೀಗಳ ಪಾರ್ಥಿವ ಶರೀರವನ್ನ ತರಲಾಗುತ್ತದೆ.

 

Advertisement

ಮಧ್ಯಾಹ್ನ 2:30 ರಿಂದ 5:30 ರವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಸಂಜೆ 5:30 ರ ಬಳಿಕ ಬೆಂಗಳೂರಿನ ಪೇಜಾವರ ಮಠಕ್ಕೆ ಶಿಫ್ಟ್ ಮಾಡಲಾಗುತ್ತೆ. 5:30 ರ ಬಳಿಕ ಮಠದಲ್ಲಿ ಅಂತಿಮ ವಿಧಿವಿಧಾನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಿದ್ದತೆಯ ಬಗ್ಗೆ ಬೆಂಗಳೂರು ನಗರ ಡಿಸಿ ಶಿವಮೂರ್ತಿ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next