Advertisement
ಕೋವಿಡ್ ಸೋಂಕಿನ ಕಾರಣದಿಂದಾಗಿ ಕಾರಣ ವಿಳಂಬವಾಗಿದ್ದ 2019 ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ 67 ನೇ ರಾಷ್ಟ್ರೀಯ ಚಲನ ಚಿತ್ರ ರಾಷ್ಟ್ರೀಯ ಪ್ರಶಸ್ತಿಯನ್ನು ಈ ಸಾಲಿನಲ್ಲಿ ಘೋಷಿಸಲಾಗಿದೆ.
Related Articles
Advertisement
‘ಸೂಪರ್ ಡಿಲಕ್ಸ್’ ಚಿತ್ರಕ್ಕಾಗಿ ವಿಜಯ್ ಸೇತುಪತಿ ಅತ್ಯುತ್ತಮ ಪೋಷಕ ನಟ ಮತ್ತು ಪಲ್ಲವಿ ಜೋಶಿ ‘ದಿ ತಾಷ್ಕೆಂಟ್ ಫೈಲ್ಸ್’ ಚಿತ್ರಕ್ಕಾಗಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿದ್ದಾರೆ.
ಈ ವರ್ಷ ಭಾರತದಿಂದ ಆಸ್ಕರ್ ಪ್ರಶಸ್ತಿಗೆ ಪ್ರವೇಶ ಪಡೆದಿದ್ದ ‘ಜಲ್ಲಿಕಟ್ಟು’ ಅತ್ಯುತ್ತಮ ಛಾಯಾಗ್ರಹಣ ಪ್ರಶಸ್ತಿಯನ್ನು ಪಡೆದಿದೆ. ಇನ್ನು, ಕನ್ನಡದ ರಕ್ಷಿತ್ ಶೆಟ್ಟಿ ನಟನೆಯ ಅವನೇ ಶ್ರೀಮನ್ನಾರಾಯಣ ಹಾಗೂ ತುಳು ಭಾಷೆಯ ಪಿಂಗಾರಾ ಚಿತ್ರಗಳು ಪ್ರಶಸ್ತಿ ಗಿಟ್ಟಿಸಿಕೊಂಡಿವೆ.
ಚಂದನವನದಲ್ಲಿ ಅಮೋಘ ಪ್ರದರ್ಶನ ಕಂಡು ಬ್ಲಾಕ್ ಬಸ್ಟರ್ ಚಿತ್ರಗಳ ಪೈಕಿಗೆ ಸೇರಿದ್ದ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಸಾಹಸ ನಿರ್ದೇಶನಕ್ಕೆ ರಾಷ್ಟ್ರೀಯ ಪ್ರಶಸ್ತಿ ಗರಿ ಲಭಿಸಿದೆ. ಈ ಚಿತ್ರಕ್ಕೆ ವಿಕ್ರಮ್ ಮೋರ್ ಅವರು ಸಾಹಸ ನಿರ್ದೇಶನ ಮಾಡಿದ್ದರು.
ಬೆಸ್ಟ್ ಬುಕ್ ಆನ್ ಸಿನಿಮಾ ವಿಭಾಗದಲ್ಲಿ ಎರಡನೇ ವಿಜೇತರಾಗಿ ಪಿ.ಆರ್ ರಾಮದಾಸ್ ನಾಯ್ಡು ಆಯ್ಕೆ ಆಗಿದ್ದಾರೆ. ಅವರು ‘ಜಾಗತಿಕ ಸಿನಿಮಾ’ ಹೆಸರಿನ ಪುಸ್ತಕ ಬರೆದಿದ್ದರು.
ಇನ್ನು, 66 ನೇ ವರ್ಷದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಲೋಕಸಭಾ ಚುನಾವಣೆಯ ಕಾರಣದಿಂದ ಏಪ್ರಿಲ್, ಮೇ ನಲ್ಲಿ ನಡೆಯಬೇಕಾಗಿದ್ದನ್ನು ಆಗಸ್ಟ್ ವರೆಗೆ ಮುಂದೂಡಲಾಗಿತ್ತು.
ಓದಿ : ಮಾಜಿ ಶಾಸಕರ ಮಗನಿಗೆ ನಕಲಿ ಅಶ್ಲೀಲ ವಿಡಿಯೋ ಬಳಸಿ ಬ್ಲಾಕ್ ಮೇಲ್!