Advertisement

ರಾಷ್ಟ್ರಧ್ವಜ ಸುಟ್ಟ ಪ್ರಕರಣ: ಕ್ಷಮೆಯಾಚನೆ

12:30 AM Jan 29, 2019 | |

ಹೊಸದಿಲ್ಲಿ: ಗಣರಾಜ್ಯೋತ್ಸವದ ದಿನವೇ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ ಎದುರು ರಾಷ್ಟ್ರಧ್ವಜವನ್ನು ಸುಟ್ಟ ಘಟನೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಘಟನೆಯ ಬಗ್ಗೆ ಬ್ರಿಟನ್‌ ವಿದೇಶಾಂಗ ಸಚಿವಾಲಯ ಕ್ಷಮೆ ಯಾಚಿಸಿದೆ. ಖಲಿಸ್ಥಾನ್‌ ಪರ ಹೋರಾಟಗಾರರು ಈ ಕೃತ್ಯ ಎಸಗಿದ್ದು, ಒಂದು ವರ್ಷದಲ್ಲೇ ಇದು ಎರಡನೆಯ ಘಟನೆಯಾಗಿದೆ. ಈ ವೇಳೆ ಭಾರತದ ರಾಷ್ಟ್ರ ಧ್ವಜವನ್ನು ಕಾಲಿನಿಂದ ಒದೆಯಲಾಗಿದ್ದು, ಭಾರತ ವಿರೋಧಿ ಹಾಗೂ ಖಲಿಸ್ತಾನ್‌ ಪರ ಘೋಷಣೆ ಕೂಗಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಧೋವಲ್‌ ಫೋಟೋಗಳನ್ನು ಹಿಡಿದು ಪ್ರತಿಭಟನೆ ನಡೆಸಲಾಗಿದ್ದು, ಇವೆಲ್ಲವೂ ಬ್ರಿಟಿಷ್‌ ಪೊಲೀಸರ ಎದುರೇ ನಡೆದಿರುವುದು ಅಚ್ಚರಿಯ ಸಂಗತಿಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next