Advertisement

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಮತ್ತೆ ಇಡಿ ಮುಂದೆ ಹಾಜರಾದ ಡಿ.ಕೆ.ಶಿವಕುಮಾರ್

03:35 PM Nov 14, 2022 | Team Udayavani |

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಮವಾರ ಮತ್ತೆ ದೆಹಲಿಯ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

Advertisement

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಫೆಡರಲ್ ಏಜೆನ್ಸಿ ಅವರ ಹೇಳಿಕೆಯನ್ನು ದಾಖಲಿಸುತ್ತಿರುವುದು ಇದು ಎರಡನೇ ಬಾರಿಯಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ”ತನಿಖೆಗೆ ಸಂಬಂಧಿಸಿದಂತೆ ಸಂಸ್ಥೆಯು ಕೇಳಿದ ಎಲ್ಲಾ ದಾಖಲೆಗಳನ್ನು ಒದಗಿಸಿದ್ದೇನೆ. ಯಂಗ್ ಇಂಡಿಯಾ ವಿಚಾರದಲ್ಲಿ ಇಡಿ ಮತ್ತೊಮ್ಮೆ ನನಗೆ ಸಮನ್ಸ್ ನೀಡಿದೆ. ನಾನು ಅವರಿಗೆ ಕೆಲವು ಕಾಗದಗಳನ್ನು ಕಳುಹಿಸಿದೆ. ಅವರು ಇನ್ನೂ ತೃಪ್ತರಾಗಿಲ್ಲ ಎಂದು ನಾನು ಭಾವಿಸುತ್ತೇನೆ. ಅವರು ನನ್ನನ್ನು ಕರೆದಿದ್ದರು, ನಾನು ಪೂರ್ವನಿಗದಿತ ಬೃಹತ್ ಕಾರ್ಯಕ್ರಮವನ್ನು ಹೊಂದಿದ್ದರಿಂದ ನಾನು ಆ ದಿನ ಭಾಗವಹಿಸಲು ಸಾಧ್ಯವಾಗಲಿಲ್ಲ. ಇಂದು ಅವರು ನನ್ನನ್ನು ಮತ್ತೆ ಕರೆಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

”ಮರೆಮಾಡಲು ಏನೂ ಇಲ್ಲ. ನಾವು ದತ್ತಿ ಕೆಲಸಕ್ಕಾಗಿ ಏನು ನೀಡಿದ್ದೇವೆಯೋ ಅದನ್ನು ನಾವು ನೀಡಿದ್ದೇವೆ. ನಾವೂ ಸಾರ್ವಜನಿಕ ಜೀವನದಲ್ಲಿ ಇದ್ದೇವೆ. ತಪ್ಪೇನಿಲ್ಲ. ನಾನು ಮಾತ್ರವಲ್ಲ, ಯಂಗ್ ಇಂಡಿಯಾದ ಅನೇಕ ಹಿತೈಷಿಗಳು ಯಂಗ್ ಇಂಡಿಯನ್‌ಗೆ ದೇಣಿಗೆಗಳನ್ನು ನೀಡಿದ್ದಾರೆ ಎಂದರು.

ಕಳೆದ ತಿಂಗಳು ಪ್ರಕರಣದಲ್ಲಿ ಇಡಿ ಅವರನ್ನು ಕೊನೆಯದಾಗಿ ಪ್ರಶ್ನಿಸಿತ್ತು,ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ಕಳೆದ ಕೆಲವು ತಿಂಗಳುಗಳಿಂದ ಇಡಿ ವಿಚಾರಣೆ ನಡೆಸುತ್ತಿದೆ. ಗಾಂಧಿ ಕುಟುಂಬಸ್ಥರು ಯಂಗ್ ಇಂಡಿಯದ ಬಹುಪಾಲು ಷೇರುದಾರರಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next