Advertisement

ನೆಲಮಂಗಲ ರಾ.ಹೆದ್ದಾರಿ: ಅವಧಿ ಮುಗಿದ ಬಳಿಕವೂ ಶುಲ್ಕ ವಸೂಲಿ; ಪ್ರತಿಭಟನೆ

01:22 PM Jun 17, 2022 | Team Udayavani |

ನೆಲಮಂಗಲ: ಇಲ್ಲಿನ ನೆಲಮಂಗಲ ತುಮಕೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾಸ್ ಟೋಲ್‌ ಕಂಪನಿಯ ಅವಧಿ ಮುಗಿದ ಬಳಿಕವೂ ವಾಹನ ಸವಾರರಿಂದ ಟೋಲ್ ಶುಲ್ಕ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ವಕೀಲ ಜಗದೀಶ್ ಮತ್ತು ಕನ್ನಡ ಪರ ಸಂಘಟನೆಗಳ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಗುತ್ತಿದೆ.

Advertisement

ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ನೆಲಮಂಗಲ ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಶುಲ್ಕ ಸಂಗ್ರಹಕ್ಕೆ 19 ವರ್ಷದ ಅವಧಿಗೆ ಗುತ್ತಿಗೆ ಪಡೆದಿದ್ದ ಜಾಸ್ ಟೋಲ್ ಕಂಪನಿ ಅವಧಿ ಮುಗಿದ ಬಳಿಕವೂ ವಾಹನ ಸವಾರರಿಂದ ಶುಲ್ಕ ವಸೂಲಿ ಮಾಡುತ್ತಿದೆ.

ಟೋಲ್ ಶುಲ್ಕ ಸಂಗ್ರಹದ ಅವಧಿ ಪೂರ್ಣಗೊಂಡಿದೆ. ಆದರೂ ಟೋಲ್‌ ಶುಲ್ಕ ವಸೂಲಿ ಮಾಡುತ್ತಿರುವುದು ಖಂಡನೀಯ ಎಂದು ಕೆಲಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ:ಅಕ್ರಮ ಗೋಮಾಂಸ ಮಾರಾಟ: ಮೂವರ ಬಂಧನ

ಸ್ಥಳಕ್ಕೆ ಪೊಲೀಸರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಭೇಟಿ, ಪ್ರತಿಭಟನಾ ನಿರತರನ್ನು ಮನವೊಸಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next