Advertisement
ಮಕ್ಕಳ ಪ್ರಶ್ನೆಗಳಿಗೆ ಉತ್ತರ ದನ ಹಾಲು ಕೊಡುವುದು ಹೇಗೆ?, ಭತ್ತದ ತೆನೆ ಅಕ್ಕಿಯಾಗುವುದು ಹೇಗೆ ?, ತರಕಾರಿ ಗಿಡಗಳು ಹೇಗಿರುತ್ತೆ ? ಹೀಗೆ ಸಾಲು ಸಾಲು ಪ್ರಶ್ನೆಗಳು ಮಕ್ಕಳ ಮನದಲ್ಲಿ ತುಂಬಿದ್ದವು.ಮಕ್ಕಳ ಇಂತಹ ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಇಲ್ಲಿ ನಡೆದ ‘ಹಳ್ಳಿಯಲ್ಲಿ ಚಿಣ್ಣರು’ ಕಾರ್ಯಕ್ರಮ ಯಶಸ್ವಿಯಾಯಿತು. ನಗರ ಪ್ರದೇಶದ ಕಾಂಕ್ರೀಟ್ ಕಾಡಿನ ನಡುವೆ ಬೆಳೆದ ಮಕ್ಕಳಿಗೆ ಈ ಗ್ರಾಮೀಣ ಪ್ರದೇಶದ ಒಂದು ದಿನದ ಒಡನಾಟ ಪರಿಸರದ ಪಾಠಗಳನ್ನು ಕಲಿಸಿಕೊಟ್ಟಿತು.
Related Articles
Advertisement
ದಿನವಿಡೀ ನಡೆದ ಶಿಬಿರಕ್ಕೆ ಪತ್ರಕರ್ತ, ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಆಗಮಿಸಿ, ಮಕ್ಕಳ ಚಟುವಟಿಕೆಗಳಿಗೆ ಹುರುಪು ತುಂಬಿದರು. ಗ್ರೀನ್ ವುಡ್ ಫಾರ್ಮ್ಸ್ ನ ಮಾಲಕ, ಪತ್ರಕರ್ತ ಶ್ರೀನಿವಾಸ್ ನಾಯಕ್ ಇಂದಾಜೆ ಮಕ್ಕಳ ಆಸಕ್ತಿದಾಯಕ ಚಟುವಟಿಕೆಗಳಿಗೆ ಫಾರ್ಮ್ಸ್ ನಲ್ಲಿ ಅವಕಾಶ ಒದಗಿಸಿಕೊಡುವುದಾಗಿ ತಿಳಿಸಿದರು. ಚಿಂತನ ಬಳಗದ ಅಧ್ಯಕ್ಷ ಇಸ್ಮಾಯಿಲ್, ಸುಖೇಶ್ ಶೆಟ್ಟಿ, ಪ್ರೇಮ್ನಾಥ್ ಮರ್ಣೆ, ಸಂಧ್ಯಾ ಪ್ರೇಮ್ ನಾಥ್ ಮೊದಲಾದವರು ದಿನವಿಡೀ ನಡೆದ ಮಕ್ಕಳ ‘ಹಳ್ಳಿಯಲ್ಲಿ ಚಿಣ್ಣರು’ ಕಾರ್ಯಕ್ರಮದ ನೇತೃತ್ವ ವಹಿಸಿ ಅರ್ಥಪೂರ್ಣವಾಗಿ ನಡೆಸಿಕೊಟ್ಟರು.
ಪಕ್ಷಿಗಳ ಹೊಸ ಲೋಕಪರಿಸರ ತಜ್ಞ ಅರವಿಂದ ಕುಡ್ಲ ನಡೆಸಿಕೊಟ್ಟ ಪಕ್ಷಿ ಪ್ರೀತಿಯ ತರಗತಿ ಮಕ್ಕಳನ್ನು ಪಕ್ಷಿ ಸಂಕುಲದ ಹೊಸ ಲೋಕಕ್ಕೆ ಕೊಂಡೊಯ್ಯಿತು. ಪಕ್ಷಿ ಪ್ರೀತಿ ಯಾಕೆ ಬೇಕು ಎನ್ನುತ್ತಲೇ ಪಕ್ಷಿ ಲೋಕದ ತನ್ನ ಅಧ್ಯಯನದ ಅನುಭವವನ್ನು ಮಕ್ಕಳೊಂದಿಗೆ ಹಂಚಿಕೊಂಡರು. ಪಕ್ಷಿಗಳ ಸಚಿತ್ರ ಮಾಹಿತಿಯ ಜತೆಗೆ ಅದರ ಚಲನವಲನ, ಗೂಡು ಕಟ್ಟುವಿಕೆ, ಆಹಾರ ಪದ್ಧತಿಗಳ ಬಗ್ಗೆ ಮಕ್ಕಳಿಗೆ ತಿಳಿಸಿಕೊಟ್ಟರು. ಪಕ್ಷಿಗಳ ಜತೆಗಿನ ಒಡನಾಟವು ಪರಿಸರದ ಮೇಲಿನ ಪ್ರೀತಿಯನ್ನೂ ಹೆಚ್ಚಿಸುತ್ತದೆ ಎಂದು ಮಕ್ಕಳಿಗೆ ಮನನ ಮಾಡಿದರು. ಸಂಭ್ರಮಪಟ್ಟ ಮಕ್ಕಳು
ಕಾಂಕ್ರೀಟ್ ಕಾಡುಗಳ ಮಧ್ಯೆ ವಾಸಿಸುವ ನಗರದ ಪ್ರದೇಶದ ವಿದ್ಯಾರ್ಥಿಗಳು ದಟ್ಟ ಅರಣ್ಯದ ಹಸಿರು ಪರಿಸರದೊಂದಿಗೆ ಸಂತಸದ ದಿನವನ್ನು ಕಳೆದು ಸಂಭ್ರಮಪಟ್ಟಿದ್ದಾರೆ.
– ಇಸ್ಮಾಯಿಲ್, ಅಧ್ಯಕ್ಷರು, ಚಿಂತನ ಬಳಗ ಮಂಗಳೂರು