Advertisement

ದ.ಕ. ಮತ್ತು ಉಡುಪಿ ಜಿಲ್ಲೆಯಾದ್ಯಂತ ಇಂದಿನಿಂದ ನವರಾತ್ರಿ ,ದಸರಾ ಸಂಭ್ರಮ

01:51 AM Oct 07, 2021 | Team Udayavani |

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಅ. 7ರಿಂದ ನವರಾತ್ರಿ, ದಸರಾ ಸಂಭ್ರಮ ಆರಂಭಗೊಳ್ಳಲಿದ್ದು, ಉಭಯ ಜಿಲ್ಲೆಗಳ ದೇವಾಲಯಗಳಲ್ಲಿ ಸಿದ್ಧತೆ ನಡೆಯುತ್ತಿವೆ.

Advertisement

ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ 9 ದಿನಗಳ ಕಾಲ ನವರಾತ್ರಿ ಅಂಗವಾಗಿ ವಿಶೇಷ ಪೂಜೆ, ಹತ್ತನೇ ದಿನ ವಿಜಯದಶಮಿ ಕಾರ್ಯಕ್ರಮ ನೆರವೇರಲಿದೆ. ಹೆಚ್ಚಿನ ದೇಗುಲಗಳು ವಿದ್ಯುತ್‌ ದೀಪ, ಹೂವುಗಳಿಂದ ಶೃಂಗಾರಗೊಂಡಿವೆ.

ದ.ಕ.ಜಿಲ್ಲೆಯ ಶ್ರೀ ಮಂಗಳಾದೇವಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ಪೊಳಲಿ ಶ್ರೀ ರಾಜರಾಜೇಶ್ವರೀ, ಕಟೀಲು ಶ್ರೀ ದುರ್ಗಾ ಪರಮೇಶ್ವರೀ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕೆ, ಕಡಿಯಾಳಿ ಮಹಿಷಮರ್ದಿನಿ, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ, ಕಮಲಶಿಲೆ ಬ್ರಾಹ್ಮೀ ದುರ್ಗಾಪರಮೇಶ್ವರೀ, ಬೈಲೂರು ಮಹಿಷಮರ್ದಿನಿ, ಕನ್ನರ್ಪಾಡಿ ಶ್ರೀ ದುರ್ಗಾಪರಮೇಶ್ವರೀ, ದೊಡ್ಡಣಗುಡ್ಡೆ ಶ್ರೀ ಆದಿಶಕ್ತಿ, ಇಂದ್ರಾಣಿ ಪಂಚದುರ್ಗೆ, ಕಾಪು ಮಾರಿಗುಡಿ, ಕುಂಜಾರು ದುರ್ಗಾದೇವಿ ಸಹಿತ ಇತರ ದೇವಸ್ಥಾನಗಳಲ್ಲಿ ಸರಳವಾಗಿ ನವರಾತ್ರಿ ಉತ್ಸವ ನಡೆಯಲಿದೆ.

ಸರಳ ಆಚರಣೆಗೆ ಮಾರ್ಗಸೂಚಿ
ಕೋವಿಡ್‌ ಆತಂಕ ಹಿನ್ನೆಲೆಯಲ್ಲಿ ನವರಾತ್ರಿ, ದಸರಾ ಆಚರಣೆಯನ್ನು ಸರಳವಾಗಿ ಆಚರಿಸುವ ಬಗ್ಗೆ ಉಡುಪಿ, ದ.ಕ. ಜಿಲ್ಲಾಡಳಿತ ಈಗಾಗಲೇ ಮಾರ್ಗಸೂಚಿ ಹೊರಡಿಸಿದೆ. ಭಕ್ತರು ಕಡ್ಡಾಯವಾಗಿ ಎರಡು ಡೋಸ್‌ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣಪತ್ರ ಇದ್ದರೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು. ಭಕ್ತರು ಲಸಿಕೆ ಪಡೆಯದಿದ್ದಲ್ಲಿ ಅಂಥವರಿಗೆ ದೇವಾಲಯದ ಆವರಣದಲ್ಲಿ ಲಸಿಕಾ ಕೇಂದ್ರ ತೆರೆಯಬೇಕು.

ಇದನ್ನೂ ಓದಿ:“ಸ್ವಾಮಿತ್ವದಿಂದ ಗ್ರಾಮೀಣ ಆರ್ಥಿಕತೆ ಅಭಿವೃದ್ಧಿ’

Advertisement

ಸಾಂಸ್ಕೃತಿಕ ಕಾರ್ಯಕ್ರಮಗಳು ಶೇ. 50 ಜನರಿಗೆ ಮಿತಿಗೊಳಿಸಿ ನಡೆಸಬೇಕು. ಹುಲಿ ವೇಷಧಾರಿಗಳು ದೇವಸ್ಥಾನದ ಆವರಣದೊಳಗೆ, ಸಾರ್ವಜನಿಕ ಪ್ರದೇಶಗಳಲ್ಲಿ ಪ್ರದರ್ಶನ ನೀಡುವಾಗ ಜನಸಂದಣಿ ಯಾಗದಂತೆ ನೋಡಿಕೊಳ್ಳುವುದು, ಮಾಸ್ಕ್ ಧರಿಸದೆ ಸೇರುವ ಸಾರ್ವಜನಿಕರ ವಿರುದ್ಧ ನಿಯಮಾನುಸಾರ ದಂಡ ವಿಧಿಸಲು ಕ್ರಮ ಕೈಗೊಳ್ಳಬೇಕು ಎಂದು ಉಭಯ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next