Advertisement

‘ಕ್ಷೇತ್ರಪತಿ’ಯಾದ ನವೀನ್‌ ಶಂಕರ್‌

05:17 PM May 27, 2023 | Team Udayavani |

ನಟ ನವೀನ್‌ ಶಂಕರ್‌ ನಾಯಕರಾಗಿ ನಟಿಸಿರುವ ಹೊಸ ಚಿತ್ರ “ಕ್ಷೇತ್ರಪತಿ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮೊದಲ ಹಂತವಾಗಿ ಚಿತ್ರದ ಮೋಶನ್‌ ಪೋಸ್ಟರ್‌ ರಿಲೀಸ್‌ ಆಗಿದೆ.  ನವೀನ್‌ ಶಂಕ ಅವರಿಗೆ ಈಗ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಚಿತ್ರತಂಡ ಪೋಸ್ಟರ್‌ ರಿಲೀಸ್‌ ಮಾಡಿ ಶುಭಕೋರಿದೆ.

Advertisement

“ಕ್ಷೇತ್ರಪತಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್‌ ಪ್ರೊಡಕ್ಷನ್‌ ಅಂತಿಮ ಹಂತದಲ್ಲಿದೆ. ಜುಲೈನಲ್ಲಿ ಚಿತ್ರ ತೆರೆಗೆ ಬರಲಿದೆ. ಆಶ್ರಗ ಕ್ರಿಯೇಷನ್ಸ್‌ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಶ್ರೀಕಾಂತ್‌ ಕಟಗಿ ನಿರ್ದೇಶಿಸಿದ್ದಾರೆ. ಕ್ಷೇತ್ರಪತಿ ಸೋಶಿಯಲ್‌ ಪೊಲಿಟಿಕಲ್‌ ಡ್ರಾಮಾ ಕಥಾಹಂದರ ಹೊಂದಿದೆ ಎನ್ನುತ್ತಾರೆ ನಿರ್ದೇಶಕ ಶ್ರೀಕಾಂತ್‌.

ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯಾಗಿದ್ದು, ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ. ಚಿತ್ರಕ್ಕೆ ರವಿ ಬಸ್ರೂರ್‌ ಸಂಗೀತ ನೀಡಿದ್ದಾರೆ. ಶಿವಸಾಗರ್‌ ಛಾಯಾಗ್ರಹಣ, ಮನು ಶೇಡಾರ್‌ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಜೀವನ್‌ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಇತ್ತೀಚೆಗೆ ಬಿಡುಗಡೆಯಾಗಿ ಜನಪ್ರಿಯವಾದ ಹೊಂದಿಸಿ ಬರೆಯಿರಿ ಚಿತ್ರದಲ್ಲಿ ನಾಯಕ – ನಾಯಕಿಯಾಗಿ ನಟಿಸಿದ್ದ ನವೀನ್‌ ಶಂಕರ್‌ ಹಾಗೂ ಅರ್ಚನಾ ಜೋಯಿಸ್‌ ಕ್ಷೇತ್ರಪತಿ ಚಿತ್ರದಲ್ಲೂ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ರಾಹುಲ್‌ ಐನಾಪುರ, ಕೃಷ್ಣ ಹೆಬ್ಟಾಳೆ, ಶೈಲಶ್ರೀ ಅರಸ್‌, ನಾಟ್ಯ ರಂಗ, ಹರ್ಷ ಅರ್ಜುನ್‌ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next