Advertisement

ಜಲಾವೃತಗೊಂಡ ಗೋವನಕೊಪ್ಪ ಹಳೆ ಸೇತುವೆ: ನದಿ ಪಾತ್ರದ ಜನರಲ್ಲಿ ಹೆಚ್ಚಿದ ಪ್ರವಾಹ ಭೀತಿ

06:57 PM Aug 13, 2022 | Team Udayavani |

ಕುಳಗೇರಿ ಕ್ರಾಸ್ (ಬಾಗಲಕೋಟೆ) :  ನವಿಲುತಿರ್ಥ ಜಲಾಶಯದ ಮೇಲ್ಬಾಗದಲ್ಲಿ ಸುರಿಯುತ್ತಿರುವ ಮಳೆಗೆ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಸದ್ಯ ಹೆಚ್ಚುವರಿ ನೀರನ್ನು ಮಲಪ್ರಭಾ ನದಿಗೆ ಬಿಟ್ಟಿದ್ದರಿಂದ ಜಿಲ್ಲೆಯ ಗಡಿ ಭಾಗದ ಹುಬ್ಬಳ್ಳಿ ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿ 218 ಸಂಪರ್ಕ ಕಲ್ಪಿಸುವ ಹಳೆ ಸೇತುವೆ ಜಲಾವೃತಗೊಂಡಿದೆ.

Advertisement

ನವಿಲುತಿರ್ಥ ಜಲಾಶಯದಿಂದ 5594 ಕ್ಯೊಸೆಕ್ ನೀರು ಹರಿಬಿಡಲಾಗಿದ್ದು ನದಿ ಪಾತ್ರದ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಹಲವು ಸೇತುವೆಗಳು ಜಲಾವೃತಗೊಂಡಿವೆ.

ಬಾಗಲಕೋಟೆ-ಗದಗ ಸಂಪರ್ಕ ರಸ್ತೆ ಕಡಿತಗೊಂಡಿದ್ದರಿಂದ ಹಲವು ಗ್ರಾಮದ ಜನರಿಗೆ ಸುತ್ತುವರೆದು ನದಿ ದಾಟುವ ಪರಿಸ್ಥಿತಿ ಎದುರಾಗಿದೆ.

ರೈತರ ಜಮಿನುಗಳಿಗೆ ಪ್ರವಾಹದ ನೀರು ನುಗ್ಗಿದ್ದು ಸದ್ಯ ಗೋವಿನಜೋಳ, ಈರುಳ್ಳಿ, ಕಬ್ಬು, ಸೂರ್ಯಕಾಂತಿ, ಹೆಸರು ಸೇರಿದಂತೆ ತೋಟಗಾರಿಕೆ ಬೆಳೆಗಳಾದ ಪೇರಲ ಮುಂತಾದ ಬೆಳೆಗಳಿಗೆ ನೀರು ನುಗ್ಗಿದ್ದು ನದಿ ಪಾತ್ರದ ರೈತರಲ್ಲಿ ಆತಂಕ ಮನೆಮಾಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಬಾರ್‌ ಮುಂದೆ ಹೆಚ್ಚಾದ ಅಪಘಾತ; ಬಾರ್‌ ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ

Advertisement

ಸದ್ಯ ಮಲಪ್ರಭಾ ಪ್ರವಾಹದ ನೀರು ಹೆಚ್ಚುತ್ತಿದ್ದು ನದಿ ಪಾತ್ರದಲ್ಲಿನ ರೈತರು ಪಂಪ್‌ಸೆಟ್ ಜಾನುವಾರು ಸೇರಿದಂತೆ ತಮ್ಮ ಸಲಕರಣೆಗಳನ್ನು ಬೇರೆ ಕಡೆ ಸಾಗಿಸುತ್ತಿದ್ದಾರೆ. ತಾವು ಬೆಳೆದ ಪೇರಳೆ ಹಣ್ಣುಗಳನ್ನು ಬಿಡಿಸಿ ಅಗ್ಗದ ಬೆಲೆಗೆ ಮಾರುತ್ತಿದ್ದಾರೆ. ಹಣ್ಣುಗಳನ್ನು ಮೊದಲು ತೆಗೆದುಕೊಂಡು ಹೋಗುವಂತೆ ರೈತರು ವ್ಯಾಪಾರಸ್ಥರಲ್ಲಿ ಅಂಗಲಾಚುತ್ತಿದ್ದಾರೆ.

ಕಳೆದ ಬಾರಿ ಬೆಳೆದಿದ್ದ ಉತ್ತಮ ಬೆಳೆಗಳು ರೈತರ ಕೈ ಸೇರುವ ಸಂದರ್ಭದಲ್ಲಿ ಪ್ರವಾಹಕ್ಕೆ ತುತ್ತಾಗಿದ್ದವು. ಸದ್ಯ ಮತ್ತೆ ಸಾಲ ಮಾಡಿ ಬಿತ್ತನೆ ಮಾಡಿದ ರೈತರ ಜಮಿನುಗಳಿಗೆ ಪ್ರವಾಹದ ನೀರು ನುಗ್ಗಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಬಾದಾಮಿ ತಹಸಿಲ್ದಾರ ಜೆ ಬಿ ಮಜ್ಜಗಿ ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿದ್ದು ಮಲಪ್ರಭಾ ನದಿಯ ಪ್ರವಾಹವನ್ನು ವೀಕ್ಷಿಸಿದ ಅವರು, ನೀರಿನ ಮಟ್ಟ ಪರಿಶೀಲಿಸಿದರು. ನಂತರ ಗ್ರಾಮಗಳಲ್ಲಿ ಸಂಚರಿಸಿ ಜನರಲ್ಲಿ ಜಾಗ್ರತಿ ಮೂಡಿಸಿ ನದಿ ಪಾತ್ರದಲ್ಲಿ ಬಟ್ಟೆ ತೊಳೆಯುವುದು, ಸ್ನಾನ ಮಾಡುವುದು, ವಾಹನ ಹಾಗೂ ಜಾನುವಾರುಗಳ ಮೈ ತೊಳೆಯುವುದು ಮಾಡಬಾರದು, ಸೆಲ್ಪಿ ಸೇರಿದಂತೆ ಪ್ರವಾಹದಲ್ಲಿ ಹುಚ್ಚು ಸಾಹಸ ಮಾಡುವ ಗೋಜಿಗೆ ಹೋಗಬಾರದು ಎಂದು ಎಚ್ಚರಿಸಿದರು. ಪ್ರವಾಹ ಪ್ರದೇಶದಲ್ಲಿ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next