ಪಟಿಯಾಲ: 34 ವರ್ಷ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸದಲ್ಲಿರುವ ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಬಹುತೇಕ ನಾಳೆ (ಶನಿವಾರ) ಬಿಡುಗಡೆಯಾಗಲಿದ್ದಾರೆ. ಈ ಬಗ್ಗೆ ಅವರ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.
34 ವರ್ಷಗಳ ಹಿಂದೆ ವ್ಯಕ್ತಿಯೊಬ್ಬನ ಸಾವಿಗೆ ಕಾರಣವಾದ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಸಿಧು ನಾಳೆ ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಅವರ ವಕೀಲ ಎಚ್ಪಿಎಸ್ ವರ್ಮಾ ಕೂಡ ಬೆಳವಣಿಗೆಯನ್ನು ಪರಿಶೀಲಿಸಿದ್ದಾರೆ. “ನಾಳೆ ಸರ್ದಾರ್ ನವಜೋತ್ ಸಿಂಗ್ ಸಿಧು ಅವರನ್ನು ಪಟಿಯಾಲಾ ಜೈಲಿನಿಂದ ಬಿಡುಗಡೆ ಮಾಡಲಾಗುವುದು” ಎಂದಿದ್ದಾರೆ.
1988ರ ಡಿಸೆಂಬರ್ 27 ರಂದು ಸಿಧು ಪಟಿಯಾಲ ಪ್ರಜೆ 65 ವರ್ಷದ ಗುರ್ನಾಮ್ ಸಿಂಗ್ ಜೊತೆ ಪಾರ್ಕಿಂಗ್ ಜಾಗದ ಬಗ್ಗೆ ಜಗಳವಾಡಿದ್ದರು. ಗುರ್ನಾಮ್ ಸಿಂಗ್ ಅವರನ್ನು ಸಿಧು ಮತ್ತು ಅವರ ಸ್ನೇಹಿತ ರೂಪಿಂದರ್ ಸಿಂಗ್ ಸಂಧು ಅವರು ಕಾರಿನಿಂದ ಎಳೆದೊಯ್ದು ಹೊಡೆದಿದ್ದರು. ನಂತರ, ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಸಿಧು ಅವರು ಗುರ್ನಾಮ್ ಸಿಂಗ್ ಅವರ ತಲೆಗೆ ಹೊಡೆದು ಕೊಂದಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದರು.
Related Articles
2018 ರಲ್ಲಿ, ವ್ಯಕ್ತಿಯೊಬ್ಬರಿಗೆ ಉದ್ದೇಶ ಪೂರ್ವಕವಾಗಿ ಹಾನಿಯನ್ನುಂಟು ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಸಿಧುಗೆ 1,000 ರೂಪಾಯಿ ಶಿಕ್ಷೆಯನ್ನು ವಿಧಿಸಿತು. ಆದಾಗ್ಯೂ ತನ್ನದೇ ಆದ ತೀರ್ಪನ್ನು ಪರಿಶೀಲಿಸಿದ ನಂತರ, ನ್ಯಾಯಾಲಯವು ಸಿಧುಗೆ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿದೆ.