Advertisement

ಊಹಾಪೋಹಕ್ಕೆ ತೆರೆ; ಪಂಜಾಬ್ ಸಿಎಂಗೆ ರಾಜೀನಾಮೆ ಸಲ್ಲಿಸಿದ ನವಜ್ಯೋತ್ ಸಿಂಗ್ ಸಿಧು

09:43 AM Jul 16, 2019 | Team Udayavani |

ನವದೆಹಲಿ:ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸಚಿವ ಸಂಪುಟದಿಂದ ನವಜ್ಯೋತ್ ಸಿಂಗ್ ಸಿಧು ಹೊರನಡೆಯಲಿದ್ದಾರೆ ಎಂಬ ಊಹಾಪೋಹಕ್ಕೆ ಕೊನೆಗೂ ತೆರೆಬಿದ್ದಿದ್ದು, ಸಿಧು ಸೋಮವಾರ ತಮ್ಮ ರಾಜೀನಾಮೆ ಪತ್ರವನ್ನು ಸಿಎಂ ಸಿಂಗ್ ಗೆ ಕಳುಹಿಸಿದ್ದಾರೆ.

Advertisement

ನಾನು ಇಂದು ನನ್ನ ರಾಜೀನಾಮೆ ಪತ್ರವನ್ನು ಪಂಜಾಬ್ ಮುಖ್ಯಮಂತ್ರಿಗೆ ಕಳುಹಿಸಿದ್ದೇನೆ ಎಂದು ಸಿಧು ತಮ್ಮ ಟ್ವೀಟರ್ ಖಾತೆಯಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷ ಸಿಧು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ತೆರಳಿದ್ದು, ಈ ಸಂದರ್ಭದಲ್ಲಿ ಪಾಕ್ ಆರ್ಮಿ ಮುಖ್ಯಸ್ಥನನ್ನು ಅಪ್ಪಿಕೊಂಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮತ್ತು ಸಿಧು ನಡುವೆ ಜಟಾಪಟಿಗೆ ಕಾರಣವಾಗಿತ್ತು.

ಈ ಎಲ್ಲಾ ಗೊಂದಲದ ನಡುವೆಯೇ ಸಿಧು ತಮ್ಮ ರಾಜೀನಾಮೆ ಪತ್ರವನ್ನು ಅಮರೀಂದರ್ ಸಿಂಗ್ ಅವರಿಗೆ ಕಳುಹಿಸುವ ಬದಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಕಳುಹಿಸಿದ್ದರು. ಏತನ್ಮಧ್ಯೆ ಕಳೆದ ಒಂದು ತಿಂಗಳಿನಿಂದ ಸಿಧು ತಮ್ಮ ರಾಜೀನಾಮೆ ಪತ್ರವನ್ನು ಅಮರೀಂದರ್ ಸಿಂಗ್ ಅವರಿಗೆ ಯಾಕೆ ಕಳುಹಿಸಿಲ್ಲ ಎಂಬುದಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next