Advertisement

ಕಾರವಾರ ನೌಕಾನೆಲೆಗೆ ಅಡ್ಮಿರಲ್‌ ಭೇಟಿ

11:44 PM Oct 22, 2020 | mahesh |

ಕಾರವಾರ: ಕಾರವಾರ ನೌಕಾನೆಲೆಗೆ ಗುರುವಾರ ಭೇಟಿ ನೀಡಿದ ನೌಕಾದಳ ಮುಖ್ಯಸ್ಥ ಅಡ್ಮಿರಲ್‌ ಕರಮ್‌ ಬೀರ್‌ ಸಿಂಗ್‌ ಅವರನ್ನು ಕರ್ನಾಟಕದ ನೌಕಾದಳದ ಕಮಾಂಡರ್‌ ಹಾಗೂ ಇತರ ಅಧಿಕಾರಿಗಳು ಸ್ವಾಗತಿಸಿದರು.

Advertisement

ಐಎನ್‌ಎಸ್‌ ಕದಂಬ ನೌಕಾನೆಲೆಯ ವಿಶೇಷಗಳು ಹಾಗೂ ಶಿಪ್‌ ಲಿಫ್ಟ್‌ ಯಾರ್ಡ್‌ಗಳಿಗೆ ಭೇಟಿ ನೀಡಿ ಮಾಹಿತಿ ಪಡೆದ ಅವರು ಎರಡನೇ ಹಂತದ ಕಾಮಗಾರಿಗಳು ಹಾಗೂ ಭವಿಷ್ಯದಲ್ಲಿ ನೌಕಾದಳದ ಕಾರ್ಯ ಚಟುವಟಿಕೆಯನ್ನು ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿದರು.

ಶಿಪ್‌ ಲಿಫ್ಟ್‌ ಯಾರ್ಡ್‌ನ ಮಹತ್ವ ತಿಳಿದು, ಅದನ್ನು ವೀಕ್ಷಿಸಿದ ಅಡ್ಮಿರಲ್‌ ಕರಮ್‌ ಬೀರ್‌ ಸಿಂಗ್‌, ಕೋವಿಡ್‌ ಸಮಯದಲ್ಲಿ ನೌಕಾದಳದ ಶಿಪ್‌ಗ್ಳು ಹಾಗೂ ಸಬ್‌ಮರೀನ್‌ಗಳು ತಾಂತ್ರಿಕ ನೆರವು, ರಿಪೇರಿಯಾದ ಬಗ್ಗೆ ಮಾಹಿತಿ ಪಡೆದರು. ಸೇಲರ್ ಗಳ ಜತೆ ಮಾತನಾಡಿ ಅವರಿಗೆ ಸ್ಫೂರ್ತಿ ತುಂಬುವ ಮಾತುಗಳನ್ನಾಡಿದರು.

ಅನಂತರ ಐಎನ್‌ಎಸ್‌ ಪತಂಜಲಿ ಬಗ್ಗೆ ಮಾಹಿತಿ ಪಡೆದರು. ಉತ್ತರ ಕನ್ನಡದಲ್ಲಿ ಕೋವಿಡ್‌ ಪೀಡಿತ ಸಾರ್ವಜನಿಕರಿಗೆ ಮೊಟ್ಟ ಮೊದಲ ಬಾರಿಗೆ ದೇಶದ ರಕ್ಷಣಾ ಪಡೆಯ ಆಸ್ಪತ್ರೆಯಲ್ಲಿ ನೀಡಿದ ಚಿಕಿತ್ಸೆ, ಕೋವಿಡ್‌ ಪೀಡಿತರು ಗುಣಮುಖರಾದ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next