Advertisement

ಸಮುದ್ರ ಭಯೋತ್ಪಾದನೆಗೆ ಉಗ್ರರಿಗೆ ತರಬೇತಿ: ನೌಕಾಪಡೆ ಚೀಫ್ ಎಚ್ಚರಿಕೆ

06:13 AM Mar 05, 2019 | Team Udayavani |

ಹೊಸದಿಲ್ಲಿ : ”ಭಾರತದ ವಿರುದ್ಧ ಸಮುದ್ರ ಮೂಲಕ ಭಯೋತ್ಪಾದಕ ದಾಳಿ ನಡೆಸಲು ಉಗ್ರರಿಗೆ ತರಬೇತಿ ನೀಡಲಾಗುತ್ತಿದೆ” ಎಂದು ಭಾರತೀಯ ನೌಕಾ ಪಡೆ ಮುಖ್ಯಸ್ಥ ಸುನಿಲ್‌ ಲಾಂಬಾ ಎಚ್ಚರಿಸಿದ್ದಾರೆ.

Advertisement

ರಾಷ್ಟ್ರ ರಾಜಧಾನಿಯಲ್ಲಿ ಏರ್ಪಡಿಸಲಾಗಿರುವ ಇಂಡೋ ಪೆಸಿಫಿಕ್‌ ರೀಜಿನಲ್‌ ಡಯಾಲೋಗ್‌ ಸಮಾವೇಶದಲ್ಲಿ ಮಾತನಾಡುತ್ತಿದ್ದ ನೌಕಾ ಪಡೆ ಮುಖ್ಯಸ್ಥ ಲಾಂಬಾ ಅವರು ಪಾಕ್‌ ಮೂಲದ ಉಗ್ರರು ಹಿಂದೆ 2008ರಲ್ಲಿ ಮುಂಬಯಿ ಮೇಲೆ ನಡೆಸಿದ್ದ 26/11ರ ಉಗ್ರ ದಾಳಿಯ ರೀತಿ ಸಮುದ್ರ ಮೂಲಕ “ಸಮುಂದರೀ ಜಿಹಾದ್‌’ ರೂಪದಲ್ಲಿ ಉಗ್ರ ದಾಳಿ ನಡೆಸುವುದಕ್ಕೆ ಭಯೋತ್ಪಾದಕರಿಗೆ ತರಬೇತಿ ನೀಡಲಾಗುತ್ತಿದೆ ಮತ್ತು ಇದು ಅತ್ಯಂತ ಅಪಾಯಕಾರಿಯೂ ಸವಾಲಿನದ್ದೂ ಆಗಿದೆ ಎಂದು ಹೇಳಿದರು. 

ಭಯೋತ್ಪಾದನೆ ಎನ್ನುವುದು ಇಂದು ವಿಶ್ವಾದ್ಯಂತ ಶಾಂತಿ ಮತ್ತು ಸ್ಥಿರತೆಗೆ ಒದಗಿರುವ ಅತೀ ದೊಡ್ಡ ಸವಾಲು ಮತ್ತು ಬೆದರಿಕೆಯಾಗಿದೆ; ಆದುದರಿಂದ ಅಂತಾರಾಷ್ಟ್ರೀಯ ಸಮುದಾಯ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಒಟ್ಟಾಗಬೇಕಾದ ಅಗತ್ಯವಿದೆ  ಎಂದು ಲಾಂಬಾ ಹೇಳಿದರು.

ಭಾರತ ಸಹಿತ ವಿಶ್ವದ ಅನೇಕ ದೇಶಗಳಲ್ಲಿ, ವಿಶೇಷವಾಗಿ ಇಂಡೋ ಪೆಸಿಫಿಕ್‌ ಪ್ರಾಂತ್ಯದಲ್ಲಿ ಭಯೋತ್ಪಾದನೆಯು ಈಚಿನ ವರ್ಷಗಳಲ್ಲಿ ಬಹುರೂಪಗಳನ್ನು ಪಡೆದಿದೆ; ವಿಶ್ವದ ಕೆಲವೇ ದೇಶಗಳು ಮಾತ್ರವೇ ಇಂದು ಭಯೋತ್ಪಾದನೆಯಿಂದ ಮುಕ್ತವಾಗಿವೆ ಎಂದು ನೇವಿ ಚೀಫ್ ಅಡ್ಮಿರಲ್‌ ಸುನಿಲ್‌ ಲಾಂಬಾ ಹೇಳಿದರು.  

Advertisement

Udayavani is now on Telegram. Click here to join our channel and stay updated with the latest news.

Next