Advertisement

ಸಮುದ್ರದ ಮಧ್ಯೆ ಸಿಲುಕಿದ ಟಗ್: ರಕ್ಷಣೆಗೆ ಆಗಮಿಸಿದ ನೌಕಾದಳದ ಹೆಲಿಕಾಪ್ಟರ್

09:27 AM May 17, 2021 | Team Udayavani |

ಮಂಗಳೂರು: ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ಸಮದ್ರದ ಮಧ್ಯೆ ಬಂಡೆಗೆ ಢಿಕ್ಕಿ ಹೊಡೆದು ನಿಂತಿರುವ ಟಗ್ ನಲ್ಲಿರುವ ಸಿಬ್ಬಂದಿಗಳ ರಕ್ಷಣೆಗೆ ಮಹತ್ವದ ಕಾರ್ಯಾಚರಣೆ ನಡೆಸಲು ನೌಕಾ ದಳ ಇಂದು ಸಜ್ಜಾಗಿದೆ.

Advertisement

ಕೊಚ್ಚಿನ್ ನಿಂದ ನೌಕಾದಳದ ಹೆಲಿಪಾಪ್ಟರ್ ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಕೋಸ್ಟ್ ಗಾರ್ಡ್ ಮತ್ತು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ನೌಕಾ ದಳದ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ.

ಎನ್ಎಂಪಿಟಿ ಬಂದರಿನ ಹೊರವಲಯದ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಚಂಡಮಾರುತದ ಪರಿಣಾಮ ಆ್ಯಂಕರ್ ತುಂಡಾಗಿ ತೇಲಿ ಬಂದು, ಕಾಪು ಬಳಿಯಲ್ಲಿ ಅಪಘಾತಕ್ಕೊಳಗಾದ ಕೋರಮಂಡಲ ಎಕ್ಸ್ ಪ್ರೆಸ್ ಟಗ್ ನ 9 ಮಂದಿ ಸಿಬಂದಿಗಳು ಇನ್ನೂ ಕೂಡಾ ರಕ್ಷಣೆಯಲ್ಲಿ‌ ನಿರೀಕ್ಷೆಯಲ್ಲಿ ಸಮುದ್ರದಲ್ಲೇ ಬಾಕಿಯುಳಿದಿದ್ದಾರೆ.

ಶುಕ್ರವಾರ ಬೆಳಗ್ಗೆ11.30 ರಿಂದ ಕಡಲಲ್ಲಿ ತೇಲುತ್ತಿರುವ ಕೋರಮಂಡಲ ಎಕ್ಸ್‌ಪ್ರೆಸ್‌ ಟಗ್ ಶನಿವಾರ ಬೆಳಗ್ಗೆ 8.30 ಕ್ಕೆ ಕಾಪು ಲೈಟ್ ಬಳಿಯಿಂದ ಸುಮಾರು ಹದಿನೈದು ಕಿಲೋ ಮೀಟರ್ ದೂರದ ಕಾಪು ಪಾರ್ ಬಳಿ ಬಂಡೆಗೆ ಡಿಕ್ಕಿ ಹೊಡೆದು ನಿಂತಿರುವುದು ಪತ್ತೆಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next