Advertisement

ನಕ್ಸಲರೊಂದಿಗೆ ಗುಂಡಿನ ಚಕಮಕಿ; ಯೋಧ ಹುತಾತ್ಮ

03:59 PM Oct 25, 2020 | keerthan |

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ನಕ್ಸಲರು ಮತ್ತು ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜಿಲ್ಲಾ ಮೀಸಲು ಪಡೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

Advertisement

ಮತ್ತೂಬ್ಬ ಯೋಧ ಗಾಯಗೊಂಡಿದ್ದಾರೆ. ಓರ್ಚಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ 10 ಗಂಟೆಗೆ ಈ ಚಕಮಕಿ ನಡೆದಿದೆ.

ಮೀಸಲು ಪಡೆಯ ತಂಡವು ಗಸ್ತು ತಿರುಗುತ್ತಿದ್ದಾಗ ನಕ್ಸಲರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದರು. ಕೂಡಲೇ ಯೋಧರೂ ಪ್ರತಿದಾಳಿ ಆರಂಭಿಸಿದರು. ಕೆಲ ಕಾಲ ಎರಡೂ ಕಡೆ ಗುಂಡಿನ ಚಕಮಕಿ ನಡೆಯಿತು.

ಈ ವೇಳೆ ಯೋಧ ಸಂತು ವಡ್ಡೆ ಎಂಬವರು ಸ್ಥಳದಲ್ಲೇ ಸಾವಿಗೀಡಾದರೆ, ಕಾನ್‌ಸ್ಟೆಬಲ್‌ ಬಜ್ಜು ರಾಮ್‌ ಕಚಾಮ್‌ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.

ವಾರಗಳ ಹಿಂದೆ ಆಂಧ್ರ ಪ್ರದೇಶದಲ್ಲಿ ನಡೆದ ಪೊಲೀಸ್ ಎನ್ ಕೌಂಟರ್ ನಲ್ಲಿ ಐದು ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next