Advertisement

Bengaluru: ನಗರದಲ್ಲಿ ಶಂಕಿತ ನಕ್ಸಲ್‌ ಬಂಧನ ಪ್ರಕರಣ: ಎನ್‌ಐಎಗೆ ವರ್ಗಾವಣೆ

02:58 PM Oct 25, 2024 | Team Udayavani |

ಬೆಂಗಳೂರು: ನಿಷೇಧಿತ ಸಿಪಿಐ ಸಂಘಟನೆ ಯಲ್ಲಿ ಸಕ್ರಿಯ ಸದಸ್ಯನಾಗಿದ್ದ ಶಂಕಿತ ನಕ್ಸಲ್‌ ತಮಿಳುನಾಡು ಮೂಲದ ಅನಿರುದ್ಧ ರಾಜ್‌ ಬಂಧನ ಪ್ರಕರಣವನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು, ಪ್ರಕರಣವನ್ನು ಎನ್‌ಐಎಗೆ ವರ್ಗಾವಣೆ ಮಾಡಿದ್ದಾರೆ.

Advertisement

ಸೆ. 6 ರಂದು ತಮಿಳುನಾಡು ಮೂಲದ ಅನಿರುದ್‌ ರಾಜನ್‌ನನ್ನು ಸಿಸಿಬಿ ಮತ್ತು ಎಟಿಸಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ಬಳಿ ಬಂಧಿಸಿದ್ದರು.

ಸಿಪಿಐ ಮಾವೋವಾದಿಗಳ ಪರವಾಗಿ ಕೆಲಸ ಮಾಡುತ್ತಿದ್ದ ಅನಿರುದ್ಧ ನಿಷೇಧಿತ ಬರಹಗಳನ್ನು ಪ್ರಚುರಪಡಿಸುತ್ತಿದ್ದ. ಇದುವರೆಗೂ ಯಾವ ಪೊಲೀಸರಿಗೂ ಸಿಕ್ಕಿಬಿದ್ದಿರಲಿಲ್ಲ. ಗೆಳತಿ ನೋಡಲು ಬೆಂಗಳೂರಿಗೆ ಬಂದಿದ್ದ ಅನಿರುದ್‌ ನಿಷೇಧಿತ ಸಂಘಟನೆ ಪರ ಕೆಲಸ ಮಾಡುತ್ತಿದ್ದ. ಹಣ ಸಂಗ್ರಹ ಹಾಗೂ ಗುಪ್ತ ಸಭೆ ನಡೆಸುತ್ತಿದ್ದ. ಸೆ‌. 6 ರ ಬೆಳಗ್ಗೆ ಮೆಜೆಸ್ಟಿಕ್‌ನಿಂದ ಚೆನ್ನೈಗೆ ಹೋಗಲು ಯತ್ನಿಸುತ್ತಿರುವಾಗ ಬಸ್‌ ನಿಲ್ದಾಣ ಬಳಿ ಆತನನ್ನು ಬಂಧಿಸಲಾಗಿತ್ತು.

ವಿಕಾಸ್‌ ಘಾಡ್ಗೆ ಎಂಬ ಹೆಸರಿನಲ್ಲಿ ನಕಲಿ ಆಧಾರ್‌ ಕಾರ್ಡ್‌ ಮಾಡಿಕೊಂಡಿದ್ದ. ಬಂಧಿತ ನಿಂದ 2 ಬ್ಯಾಗ್‌ಗಳು, ಪೆನ್‌ಡ್ರೈವ್‌, ಟ್ಯಾಬ್ ವಶಕ್ಕೆ ಪಡೆಯಲಾಗಿತ್ತು. ಆರೋಪಿ ವಿರುದ್ಧ ಉಪ್ಪಾರ ಪೇಟೆ ಪೊಲೀಸ್‌ ಠಾಣೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಯಡಿ (ಯುಎಪಿಎ) ಪ್ರಕರಣ ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next