Advertisement

ನಕ್ಸಲರನ್ನು ಬೇರು ಸಮೇತ ಕಿತ್ತೂಗೆಯುತ್ತೇವೆ: ಅಮಿತ್‌ ಶಾ

01:18 AM Apr 18, 2024 | Team Udayavani |

ಹೊಸದಿಲ್ಲಿ: ದೇಶದಲ್ಲಿರುವ ಕೆಂಪು ಉಗ್ರರನ್ನು ಶೀಘ್ರವೇ ಮಟ್ಟಹಾಕುವುದರ ಜತೆಗೆ ದೇಶದಿಂದ ನಕ್ಸಲಿಸಂ ಅನ್ನು ಬೇರು ಸಮೇತ ಕಿತ್ತೂಗೆಯಲಾಗುವುದು. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಇದು ಸಾಧ್ಯ ವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಛತ್ತೀಸ್‌ಗಢದ ಕಾಂಕೇರ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾ ಚರಣೆಯಲ್ಲಿ 29 ನಕ್ಸಲರನ್ನು ಸೆದೆಬಡಿಯಲಾಗಿದ್ದು, ಈ ಬಗ್ಗೆ ಅಮಿತ್‌ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳಿಗೆ ದೊರೆತ ಬಹುದೊಡ್ಡ ಗೆಲುವು ಇದಾಗಿದೆ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next