Advertisement

ಮದುವೆಯಾಗಿ ವಾರದ ಒಳಗೆ ಧಾರ್ಮಿಕ ವಿವಾದಕ್ಕೆ ಸಿಲುಕಿದ ನಯನತಾರಾ ಜೋಡಿ

04:02 PM Jun 11, 2022 | Team Udayavani |

ತಿರುಮಲ: ನವಜೋಡಿ ಖ್ಯಾತ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಹೊಸಬಾಳಿಗೆ ಕಾಲಿರಿಸಿದ ವಾರದ ಒಳಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಿವಾದಕ್ಕೆ ಸಿಲುಕಿ ಕ್ಷಮೆಯಾಚಿಸಿದ್ದಾರೆ.

Advertisement

ಗುರುವಾರ ವೆಂಕಟೇಶ್ವರನ ಕಲ್ಯಾಣೋತ್ಸವದಲ್ಲಿ ಭಾಗವಹಿಸಲು ತಿರುಪತಿಯ ಬೆಟ್ಟದ ದೇವಸ್ಥಾನಕ್ಕೆ ತೆರಳಿದ್ದ ವೇಳೆ, ನಯನತಾರಾ ಅವರು ತಮ್ಮ ಪಾದರಕ್ಷೆಗಳನ್ನು ಧರಿಸಿ ದೇಗುಲದ ಆವರಣದಲ್ಲಿ ನಡೆಯುತ್ತಿರುವುದು ಕಂಡುಬಂದಿದೆ. ತಿರುಮಲ ತಿರುಪತಿ ಆಡಳಿತ ಮಂಡಳಿಯ ಮುಖ್ಯ ವಿಜಿಲೆನ್ಸ್ ಸೆಕ್ಯುರಿಟಿ ಆಫೀಸರ್ ನರಸಿಂಹ ಕಿಶೋರ್ ಪ್ರಕಾರ, ದೇವಾಲಯದ ಆವರಣದಲ್ಲಿ ಚಪ್ಪಲಿಯನ್ನು ಧರಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈಗ ಅಂತರ್ಜಾಲದಲ್ಲಿ ಫೋಟೋಗಳು ವೈರಲ್ ಆಗಿದ್ದು, ಆಕ್ರೋಶವೂ ವ್ಯಕ್ತವಾಗಿದೆ.

ನಯನತಾರಾ ಪಾದರಕ್ಷೆಗಳೊಂದಿಗೆ ತಿರುಗಾಡುತ್ತಿರುವುದು ಕಂಡುಬಂದಿದೆ. ನಮ್ಮ ಭದ್ರತಾ ಸಿಬ್ಬಂದಿಗಳು ತಕ್ಷಣವೇ ಪ್ರತಿಕ್ರಿಯಿಸಿದ್ದಾರೆ.ದೇವಸ್ಥಾನದ ಆವರಣದೊಳಗೆ ಫೋಟೋ ಶೂಟ್ ಮಾಡಿರುವುದನ್ನು ನಾವು ಗಮನಿಸಿದ್ದೇವೆ, ಅದ ನ್ನೂ ನಿಷೇಧಿಸಲಾಗಿದೆ. ಪವಿತ್ರ ದೇಗುಲದ ಒಳಗೆ ಖಾಸಗಿ ಕ್ಯಾಮರಾಗಳನ್ನು ಅನುಮತಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

ಶೀಘ್ರದಲ್ಲೇ ನಾವು ದಂಪತಿಗೆ ಲೀಗಲ್ ನೋಟಿಸ್ ನೀಡಲಿದ್ದೇವೆ ಎಂದು ನರಸಿಂಹ ಕಿಶೋರ್ ತಿಳಿಸಿದ್ದಾರೆ, “ನಾವು ಅವರೊಂದಿಗೂ ಮಾತನಾಡಿದ್ದೇವೆ ಮತ್ತು ಅವರು ಲಾರ್ಡ್ ಲಾಜಿ, ಟಿಟಿಡಿ ಮತ್ತು ಯಾತ್ರಾರ್ಥಿಗಳಲ್ಲಿ ಕ್ಷಮೆಯಾಚಿಸುವ ವೀಡಿಯೊವನ್ನು ಪತ್ರಿಕೆಗಳಿಗೆ ಬಿಡುಗಡೆ ಮಾಡಲು ಬಯಸಿದ್ದರು. ಆದರೆ, ನಾವು ಆಕೆಗೆ ನೋಟಿಸ್ ನೀಡಲಿದ್ದೇವೆ ಎಂದು ಹೇಳಿದ್ದಾರೆ. ಈ ನಡುವೆ ಶಿವನ್ ಹೇಳಿಕೆ ನೀಡಿ ಕ್ಷಮೆಯಾಚಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next