Advertisement

ರಾಮ ಸ್ವರ್ಗದಿಂದಿಳಿದು ಬಂದು ರೈತರ ಸಮಸ್ಯೆ ಪರಿಹರಿಸುತ್ತಾನಾ?:ಫಾರೂಕ್‌

11:36 AM Dec 09, 2018 | |

ಹೊಸದಿಲ್ಲಿ: ರಾಮ ಮಂದಿರ ವಿಚಾರದಲ್ಲಿ ಕೇಂದ್ರದ ಎನ್‌ಡಿಎ ಸರ್ಕಾರ ಜನರನ್ನು ಮೂರ್ಖರನ್ನಾಗಿಸುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ನಾಯಕ ಫಾರೂಕ್‌ ಅಬ್ದುಲ್ಲಾ ವಾಗ್ಧಾಳಿ ನಡೆಸಿದ್ದಾರೆ.

Advertisement

ಬಿಜೆಪಿ ಸರ್ಕಾರ ನಿಜವಾದ ಸಮಸ್ಯೆಗಳಾದ ರೈತರ ಸಮಸ್ಯೆ, ನಿರುದ್ಯೋಗ ಮತ್ತು ದಲಿತರ ಸಮಸ್ಯೆಗಳನ್ನು ಮರೆತು ಅನಗತ್ಯ ವಿಚಾರವಾದ ರಾಮ ಮಂದಿರ ನಿರ್ಮಾಣಕ್ಕೆ ಹೋರಾಟ ಮಾಡುತ್ತಿದೆ ಎಂದು ಕಿಡಿ ಕಾರಿದರು.

ಜಾತ್ಯಾತೀತ ಪ್ರಜಾಪ್ರಭುತ್ವವಾದ ಭಾರತದಲ್ಲಿ ಬಿಜೆಪಿ ರಾಮ ಮಂದಿರಕ್ಕಾಗಿ ಹೋರಾಟ ನಡೆಸುತ್ತಿದೆ. ರಾಮನೇನು ಸ್ವರ್ಗದಿಂದ ಬಂದು ರೈತರ ಸಮಸ್ಯೆಗಳನ್ನು ಬಗೆಹರಿಸುತ್ತಾನಾ ಎಂದು ಫಾರೂಕ್‌ ಅಬ್‌ದುಲ್ಲಾ ಪ್ರಶ್ನಿಸಿದರು.

ನಿವೇಕೆ ಕಾಶ್ಮೀರಿ ಮುಸ್ಲಿಮರನ್ನು ಪಾಕಿಸ್ಥಾನಿ  ಎಂದು ಪರಿಗಣಿಸುತ್ತೀರಿ. ನಮ್ಮನ್ನೇಕೆ ಪಾಕಿಸ್ಥಾನಕ್ಕೆ ತಳ್ಳುತ್ತೀರಿ. ವಿವಿಗಳಲ್ಲಿ ಕಾಶ್ಮೀರಿ ಮುಸ್ಲಿಮರ ಮೇಲೆ ದಾಳಿ ನಡೆಸುತ್ತೀರಿ ? ಕಾಶ್ಮೀರಿಗಳೂ ಭಾವನೆಗಳನ್ನು ಹೊಂದಿದ್ದಾರೆ ಎಂದು ನಿಮಗೇಕೆ ಅನ್ನಿಸುವುದಿಲ್ಲ ಎಂದು ಪ್ರಶ್ನಿಸಿದರು. 
 

Advertisement

Udayavani is now on Telegram. Click here to join our channel and stay updated with the latest news.

Next