Advertisement

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

10:59 PM Oct 27, 2021 | Team Udayavani |

ನವದೆಹಲಿ/ಮುಂಬೈ:ಬಾಲಿವುಡ್‌ ನಟ ಶಾರೂಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಆರೋಪಿಯಾಗಿರುವ ಹೈಪ್ರೊಫೈಲ್‌ ಡ್ರಗ್ಸ್‌ ಕೇಸ್‌ನ ತನಿಖೆಯನ್ನು ರಾಷ್ಟ್ರೀಯ ಮಾದಕವಸ್ತು ನಿಯಂತ್ರಣ ಸಂಸ್ಥೆಯ (ಎನ್‌ಸಿಬಿ) ಮುಂಬೈ ವಲಯದ ಆಯುಕ್ತರಾದ ಸಮೀರ್‌ ವಾಂಖೆಡೆ ಅವರೇ ಮುಂದುವರಿಸಲಿದ್ದಾರೆ ಎಂದು ಎನ್‌ಸಿಬಿ ಸ್ಪಷ್ಟಪಡಿಸಿದೆ.

Advertisement

ಅವರ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಪೂರಕವಾದ ಸಾಕ್ಷಿಗಳು ಲಭ್ಯವಾಗುವವರೆಗೆ ಅವರನ್ನು ಡ್ರಗ್ಸ್‌ ಪ್ರಕರಣದ ತನಿಖೆಯಿಂದ ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಎನ್‌ಸಿಬಿ ಮತ್ತೂಮ್ಮೆ ಸ್ಪಷ್ಟಪಡಿಸಿದೆ.

ವಾಂಖೆಡೆ ವಿರುದ್ಧ ಸುಲಿಗೆಯ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಬುಧವಾರದಂದು, ದೆಹಲಿಯಲ್ಲಿರುವ ಎನ್‌ಸಿಬಿ ಕೇಂದ್ರ ಕಚೇರಿಯಲ್ಲಿ ವಾಂಖೆಡೆಯವರನ್ನು ಸುಮಾರು ನಾಲ್ಕು ಗಂಟೆಗಳ ಕಾಲ ಎನ್‌ಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದರು. ಆನಂತರ, ಪ್ರಕರಣದ ತನಿಖೆಯನ್ನು ವಾಂಖೆಡೆಯವರೇ ಮುಂದುವರಿಸಲಿದ್ದಾರೆ ಎಂದು ಎನ್‌ಸಿಬಿ ಪ್ರಕಟಿಸಿದೆ.

ಇದನ್ನೂ ಓದಿ:5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಆರ್ಯನ್‌ಗೆ ಸಿಗದ ಜಾಮೀನು:
ಪ್ರಕರಣದಲ್ಲಿ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಆರ್ಯನ್‌, ಅದಕ್ಕಾಗಿ ಇನ್ನೂ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಬಾಂಬೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ಅವರ ಜಾಮೀನು ಅರ್ಜಿಯ ವಿಚಾರಣೆ ಗುರುವಾರವೂ ಮುಂದುವರಿಯಲಿದೆ. ಅರ್ಜಿಯ ವಿಚಾರಣೆ ಮಂಗಳವಾರ ಶುರುವಾಗಿತ್ತು.

Advertisement

ಮತ್ತೊಂದೆಡೆ, ಮುಂಬೈ ಸೆಷನ್ಸ್‌ ನ್ಯಾಯಾಲಯದಿಂದ ಮಂಗಳವಾರ ಜಾಮೀನು ಪಡೆದಿರುವ, ಇದೇ ಪ್ರಕರಣದ ಸಹ ಆರೋಪಿಗಳಾದ ಅವಿನ್‌ ಸಾಹು ಹಾಗೂ ಮನೀಶ್‌ ರಾಜ್‌ಗಾಹಿìಯಾ, ಮುಂಬೈನ ಅರ್ತೂರ್‌ ಜೈಲಿನಿಂದ ಬುಧವಾರ ಬಿಡುಗಡೆಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next