Advertisement

ಭಾರತ್‌ ಜೋಡೋ ಯಾತ್ರೆಯಲ್ಲಿ ಶರದ್‌ ಪವಾರ್‌, ಉದ್ಧವ್‌ ಠಾಕ್ರೆ ಭಾಗಿ

05:11 PM Oct 18, 2022 | Team Udayavani |

ಮುಂಬಯಿ: ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಮತ್ತು ಶಿವಸೇನೆ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಭಾರತ್‌ ಜೋಡೋ ಯಾತ್ರೆಯ ಆಹ್ವಾನವನ್ನು ಸ್ವೀಕರಿಸಿದ್ದಾರೆ.

Advertisement

ಇದೀಗ ಈ ಇಬ್ಬರು ನಾಯಕರು ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಮಾಹಿತಿ ನೀಡಿದ್ದಾರೆ.

ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ನವೆಂಬರ್‌ 7 ರಂದು ಮಹಾರಾಷ್ಟ್ರ ಪ್ರವೇಶಿಸಲಿದೆ. ಈ ಭಾರತ್‌ ಜೋಡೋ ಯಾತ್ರೆಗೆ ಸಹಭಾಗಿಯಾಗಲು ಯಶವಂತರಾವ್‌ ಚವಾಣ್‌ ಸಂಸ್ಥೆಗೆ ಭೇಟಿಯಾಗುವಂತೆ ಕಾಂಗ್ರೆಸ್‌ ನಾಯಕರು ಉದ್ಧವ್‌ ಠಾಕ್ರೆ ಅವರನ್ನು ಆಹ್ವಾನಿಸಿದ್ದರು.

ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ಯಾತ್ರೆ ನ.7 ರಂದು ಮಹಾರಾಷ್ಟ್ರ ಪ್ರವೇಶಿಸಲಿದೆ. ಇದಕ್ಕಾಗಿ ಕಾಂಗ್ರೆಸ್‌ ನಾಯಕರು ಅ.17 ರಂದು ಉದ್ಧವ್‌ ಠಾಕ್ರೆ ಮತ್ತು ಶರದ್‌ ಪವಾರ್‌ ಅವರನ್ನು ಭೇಟಿಯಾಗಿ ಭಾರತ್‌ ಜೋಡೋ ಯಾತ್ರೆಗೆ ಆಹ್ವಾನಿಸಿದ್ದರು.

ಇದೀಗ ಈ ಇಬ್ಬರು ನಾಯಕರು ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.ರಾಹುಲ್‌ ಗಾಂಧಿ ಆರಂಭಿಸಿದ ಭಾರತ್‌ ಜೋಡೋ ಯಾತ್ರೆ ಸೆ.7 ರಂದು ಕನ್ಯಾಕುಮಾರಿಯಿಂದ ಆರಂಭವಾಯಿತು. ಯಾತ್ರೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಗೊಳ್ಳಲಿದೆ. ಒಟ್ಟು 3,500 ಕಿ.ಮೀ ಸಂಚರಿಸುವ ಮೂಲಕ 12 ರಾಜ್ಯಗಳ ಮೂಲಕ ಈ ಯಾತ್ರೆ ಸಾಗಲಿದೆ. ಸಂಪೂರ್ಣ ಪ್ರವಾಸವನ್ನು ಪೂರ್ಣಗೊಳಿಸಲು ಇದು ಸುಮಾರು 150 ದಿನಗಳನ್ನು ತೆಗೆದುಕೊಳ್ಳುತ್ತದೆ. ಸದ್ಯ ಈ ಯಾತ್ರೆ ಕರ್ನಾಟಕದಲ್ಲಿ ನಡೆಯುತ್ತಿದೆ. ರಾಹುಲ್‌ ಗಾಂಧಿಯವರ ಭಾರತ್‌ ಜೋಡೋ ಯಾತ್ರೆ ನ.7 ರಂದು ನಾಂದೇಡ್‌ ಪ್ರವೇಶಿಸಲಿದೆ.

Advertisement

ಮಹಾರಾಷ್ಟ್ರದಲ್ಲಿ ಈ ಯಾತ್ರೆ 16 ದಿನಗಳಲ್ಲಿ 383 ಕಿ.ಮೀ. ಹೀಗಾಗಿ ಭಾರತ್‌ ಜೋಡೋ ಯಾತ್ರೆಯನ್ನು ಸ್ವಾಗತಿಸಲು ಕಾಂಗ್ರೆಸ್‌ ನಿಂದ ಸಿದ್ಧತೆಗಳು ನಡೆಯುತ್ತಿವೆ. ಭಾರತ್‌ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ ನಿರುದ್ಯೋಗ ಮತ್ತು ಆರ್ಥಿಕ ಕುಸಿತದ ವಿಷಯದ ಬಗ್ಗೆ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸುವ ಸಾಧ್ಯತೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next