Advertisement

NCP Leader; ಗುಂಡಿನ ದಾಳಿಗೈದು ಬಾಬಾ ಸಿದ್ದಿಕಿ ಬರ್ಬರ ಹ*ತ್ಯೆ!!

11:24 PM Oct 12, 2024 | Team Udayavani |

ಮುಂಬಯಿ: ನಗರದಲ್ಲಿ ಶನಿವಾರ(ಅ18) ರಾತ್ರಿ  ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಎನ್‌ಸಿಪಿಯ ಹಿರಿಯ ನಾಯಕ ಬಾಬಾ ಸಿದ್ದಿಕಿ(66)ಅವರನ್ನು ಹತ್ಯೆಗೈದಿದ್ದಾರೆ. ಗುಂಡಿನ ದಾಳಿ ನಡೆದ ತತ್ ಕ್ಷಣ ಸಮೀಪದ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬಾಬಾ ಸಿದ್ದಿಕಿ ಕೊನೆಯುಸಿರೆಳೆದಿದ್ದಾರೆ.

Advertisement

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ NCP ಬಣದಲ್ಲಿ ಗುರುತಿಸಿಕೊಂಡಿದ್ದ ಬಾಬಾ ಸಿದ್ದಿಕಿ ಸಿನಿ ರಂಗದಲ್ಲಿ ಭಾರೀ ಪ್ರಭಾವ ಹೊಂದಿದ್ದ ನಾಯಕರಾಗಿದ್ದರು. ಸಲ್ಮಾನ್, ಶಾರುಖ್ ಖಾನ್ ಅವರೊಂದಿಗೂ ಆತ್ಮೀಯತೆ ಹೊಂದಿದ್ದರು. ಸಲ್ಮಾನ್ ಮತ್ತು ಶಾರುಖ್ ನಡುವೆ ವೈಮನಸ್ಸು ಮೂಡಿದ್ದ ವೇಳೆ ಇಬ್ಬರನ್ನೂ ಒಂದು ಮಾಡಿದ್ದರು.

ವಂಡ್ರೆ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶನ್ ಸಿದ್ದಿಕ್ ಅವರ ಕಚೇರಿ ಬಳಿ ಈ ಘಟನೆ ನಡೆದಿದೆ. ದಾಳಿಯ ವಿವರಗಳು ಅಸ್ಪಷ್ಟವಾಗಿದ್ದರೂ, ಕನಿಷ್ಠ ಮೂವರು ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಆರಂಭಿಕ ವರದಿಗಳು ಸೂಚಿಸಿವೆ.ಘಟನೆಗೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಬೈ ಪೊಲೀಸರು ಭಾರೀ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವಂಡ್ರೆ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂಡಾ 1999, 2004 ಮತ್ತು 2009 ರಲ್ಲಿ ಸತತ ಮೂರು ಅವಧಿಗೆ ಶಾಸಕರಾಗಿದ್ದರು.2004-08 ಅವಧಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಕಾರ್ಮಿಕ ಖಾತೆ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. 1976 ರಿಂದ ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು 2024 ರಲ್ಲಿ ಸೇರಿದ್ದರು.

Advertisement

ಜೀಶನ್ ಬಾಬಾ ಸಿದ್ದಿಕ್ ಕಾಂಗ್ರೆಸ್‌ನ ಶಾಸಕರಾಗಿದ್ದಾರೆ. ಮುಂಬೈ ಯುವ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next