Advertisement

ಎನ್‌ಸಿಪಿ ಅಧ್ಯಕ್ಷ ಸ್ಥಾನ: ಶರದ್‌ ಪವಾರ್‌ ಮುಂದುವರಿಕೆಗೆ ಒತ್ತಾಯ

12:22 AM May 04, 2023 | Team Udayavani |

ಮುಂಬಯಿ: ಎನ್‌ಸಿಪಿ ಅಧ್ಯಕ್ಷ ಸ್ಥಾನಕ್ಕೆ ಶರದ್‌ ಪವಾರ್‌ ಅವರು ರಾಜೀನಾಮೆ ನೀಡಿದ ಬಳಿಕ ಮುಂದಿನ ಹಂತದ ಕುರಿತು ಚರ್ಚಿಸಲು ಮುಂಬಯಿಯಲ್ಲಿ ಸಭೆ ನಡೆಯಿತು. “ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸುಪ್ರಿಯಾ ಸುಳೆ ಅವರು ಸೂಕ್ತ ವ್ಯಕ್ತಿ’ ಎಂದು ಎನ್‌ಸಿಪಿ ಹಿರಿಯ ನಾಯಕ ಛಗನ್‌ ಭುಜಬಲ್‌ ಅಭಿಪ್ರಾಯಪಟ್ಟಿದ್ದಾರೆ

Advertisement

ಇನ್ನೊಂದೆಡೆ, “ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಕುರಿತು ಶರದ್‌ ಪವಾರ್‌ ಅವರಿಂದ ಅಂತಿಮ ನಿರ್ಧಾರ ಹೊರಬೀಳುವವರೆಗೂ ಮುಂದಿನ ಅಧ್ಯಕ್ಷರ ಬಗ್ಗೆ ಯಾವುದೇ ಚರ್ಚೆ ಅನಗತ್ಯ,’ ಎಂದು ಎನ್‌ಸಿಪಿ ಉಪಾಧ್ಯಕ್ಷ ಪ್ರಫ‌ುಲ್‌ ಪಟೇಲ್‌ ಹೇಳಿದ್ದಾರೆ.

ಪುಣೆಯ ಎನ್‌ಸಿಪಿ ಕಾರ್ಯಕರ್ತನೊಬ್ಬ ರಕ್ತದಲ್ಲಿ ಪತ್ರ ಬರೆದಿದ್ದು, ಅಧ್ಯಕ್ಷ ಸ್ಥಾನದಿಂದ ದೂರ ಸರಿಯುವ ನಿರ್ಧಾರವನ್ನು ವಾಪಸು ಪಡೆಯಬೇಕೆಂದು ಶರದ್‌ ಪವಾರ್‌ ಅವರಿಗೆ ಮನವಿ ಮಾಡಿದ್ದಾನೆ. ಅಲ್ಲದೇ ತನ್ನನ್ನು ಮತ್ತು ಪಕ್ಷದ ಕಾರ್ಯಕರ್ತರನ್ನು ಅನಾಥರನ್ನಾಗಿ ಮಾಡದಿರಿ ಎಂದು ಕೇಳಿಕೊಂಡಿದ್ದಾನೆ.

ಈ ನಡುವೆ, ಶರದ್‌ ಪವಾರ್‌ ಅವರು ಅಧ್ಯಕ್ಷರಾಗಿ ಮುಂದುವರಿಯಬೇಕೆಂದು ಆಗ್ರಹಿಸಿ ಎನ್‌ಸಿಪಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಜಿತೇಂದ್ರ ಅವಧ್‌ ಸಹಿತ ಪ್ರಮುಖರು ರಾಜೀನಾಮೆ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next