Advertisement

ಕುಟುಂಬಗಳಿಗೆ ಅಗತ್ಯ ದಿನಸಿ

04:00 PM Apr 22, 2020 | Suhan S |

ಗುಳೇದಗುಡ್ಡ: ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ಸಿದ್ದರಾಮಯ್ಯನವರ ಅಭಿಮಾನಿ ಬಳಗದ ವತಿಯಿಂದ ಪಟ್ಟಣದ ಪ್ರತಿ ಕುಟುಂಬಗಳಿಗೆ ಅಗತ್ಯ ದಿನಸಿ ವಸ್ತುಗಳನ್ನು ವಿತರಣೆ ಮಾಡಲು ಪುರಸಭೆ ಸದಸ್ಯರಿಗೆ ಹಸ್ತಾಂತರಿಸಲಾಯಿತು.

Advertisement

ಮಾಜಿ ಸಚಿವ ಬಿ.ಬಿ.ಚಿಮ್ಮನಕಟ್ಟಿ ಮಾತನಾಡಿ, ಎಲ್ಲರೂ ಮನೆಯಲ್ಲಿ ಇರಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಕ್ಷೇತ್ರದಲ್ಲಿ ಮಾಸ್ಕ್ ವಿತರಣೆ ಮಾಡಿದ್ದೇವೆ. ಅಗತ್ಯ ದಿನಸಿ ವಸ್ತುಗಳನ್ನು ವಿತರಿಸುತ್ತಿದ್ದೇವೆ ಎಂದು ಹೇಳಿದರು.

ಮುಖಂಡ ಹೊಳಬಸು ಶೆಟ್ಟರ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಾಜು ಜವಳಿ, ಮಲ್ಲಣ್ಣ ಯಲಿಗಾರ, ಮುಚಖಂಡಯ್ಯ ಹಂಗರಗಿ, ಸಂಜಯ ಬರಗುಂಡಿ, ಪಿ.ಆರ್‌. ಗೌಡರ, ಎಂ.ಎಚ್‌. ಚಲವಾದಿ, ಮಹೇಶ ಹೊಸಗೌಡರ, ರಾಜಮಹ್ಮದ ಬಾಗವಾನ, ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next