Advertisement
ಜಿಲ್ಲಾ ಬಾಲ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಆಶ್ರಯದಲ್ಲಿ ಗುರುವಾರ ಜಿಲ್ಲಾ, ತಾಲೂಕು ಮಟ್ಟದ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು, ಪ್ರೌಢಶಾಲಾ ಮುಖ್ಯ ಗುರುಗಳು, ವಸತಿ ನಿಲಯ ಮೇಲ್ವಿಚಾರಕರಿಗೆ ಬಾಲ್ಯ ವಿವಾಹ ನಿಷೇಧ-2006 ಹಾಗೂ ಕರ್ನಾಟಕ ತಿದ್ದುಪಡಿಕಾಯ್ದೆ ಕುರಿತು ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಜಾಗೃತಿ ಮೂಡಸಬೇಕಿದೆ ಎಂದರು. ಜಿಲ್ಲಾ ಬಾಲ್ಯ ವಿವಾಹ ತಡೆ ಮತ್ತು ಸಮನ್ವಯ ಸಮಿತಿ ಸದಸ್ಯೆ ನಾಗರತ್ನಾ ಅನಪುರ ಮಾತನಾಡಿ, 7ನೇ ತರಗತಿ ಉತ್ತೀರ್ಣರಾಗಿ 8ನೇ ತರಗತಿಯಿಂದ ವಂಚಿತರಾದ ಮಕ್ಕಳನ್ನು ಅನುಪಾಲನೆ ಮಾಡುವುದರ ಮೂಲಕ ಬಾಲ್ಯವಿವಾಹ ತಡೆಯಬಹುದಾಗಿದೆ ಎಂದು ಸಲಹೆ ನೀಡಿದರು.
Related Articles
Advertisement
ಡಿವೈಎಸ್ಪಿ ಯು. ಶರಣಪ್ಪ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಠ್ಠಲ್ ಮದೂರ, ಜಿಲ್ಲಾ ಬಾಲ್ಯವಿವಾಹ ತಡೆ ಮತ್ತು ಸಮನ್ವಯ ಸಮಿತಿ ಸದಸ್ಯ ಫಾದರ್ಜೀ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಗುರುಲಿಂಗಪ್ಪ ಮಿಣಜಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ್ ಬಿರಾದಾರ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ರಾಜೇಂದ್ರ ನಿರೂಪಿಸಿದರು. ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಜಿಲ್ಲಾ ಸಂಯೋಜಕ ಕೆ. ಯಲ್ಲಪ್ಪ ಸ್ವಾಗತಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚಂದ್ರಕಾಂತ ಚಲುವಾದಿ ವಂದಿಸಿದರು.