Advertisement

ಕೋವಿಡ್‌ ನಿಯಂತ್ರಣಕ್ಕೆ ಸಹಕರಿಸಿ: ಮಾಡಾಳ್‌ ವಿರೂಪಾಕ್ಷಪ್ಪ

02:25 PM Jul 18, 2020 | Suhan S |

ಚನ್ನಗಿರಿ: ಕೋವಿಡ್‌-19 ಸೋಂಕು ತಡೆಗಟ್ಟುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದಾಗಿದೆ. ನಾವೆಲ್ಲರೂ ಅವರಿಗೆ ಬೆಂಬಲ ನೀಡಬೇಕು. ಆಗ ಮಾತ್ರ ಸೋಂಕನ್ನು ತೊಲಗಿಸಲು ಸಾಧ್ಯ ಎಂದು ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಹೇಳಿದರು.

Advertisement

ತಾಪಂ ಸಭಾಂಗಣದಲ್ಲಿ ಪುರಸಭೆಯಿಂದ ಹಮ್ಮಿಕೊಂಡಿದ್ದ ಕೋವಿಡ್‌-19 ವಾರ್ಡ್‌ ಮಟ್ಟದ ಕಾರ್ಯಪಡೆ ಹಾಗೂ ಬೂತ್‌ ಮಟ್ಟದ ಸಮಿತಿ ಸದಸ್ಯರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೋವಿಡ್ ಸಾಂಕ್ರಾಮಿಕ ರೋಗವಾಗಿ ಪರಿಣಮಿಸಿದೆ. ಈ ರೋಗಕ್ಕೆ ಯಾರೊಬ್ಬರೂ ಭಯಪಡುವ ಅವಶ್ಯಕತೆಯಿಲ್ಲ. ಕೊರೊನಾ ನಿಯಂತ್ರಣಕ್ಕೆ ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಪ್ರತೊಯೊಬ್ಬರೂ ಅಧಿಕಾರಿಗಳೊಂದಿಗೆ ಕೈ ಜೋಡಿಸಬೇಕೆಂದು ಮನವಿ ಮಾಡಿದರು. ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ, ತಹಶಿಲ್ದಾರ್‌ ಪುಟ್ಟರಾಜ ಗೌಡ, ನಜ್ಮಾ, ತಾಪಂ ಇಒ ಎಂ.ಆರ್‌. ಪ್ರಕಾಶ್‌, ಪುರಸಭೆ ಮುಖ್ಯಾಧಿಕಾರಿ ಬಸವರಾಜ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next