Advertisement

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

06:12 PM Jul 23, 2024 | Shreeram Nayak |

ಮುದ್ದೇಬಿಹಾಳ: ಕಾಲುವೆಯಲ್ಲಿ ಬಿದ್ದ ಕುರಿ ಮರಿ ರಕ್ಷಿಸಲು ಹೋಗಿದ್ದ ಯುವಕನೊಬ್ಬ ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಗಡಿ ಭಾಗದಲ್ಲಿರುವ ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಮಂಗಳವಾರ ಸಂಜೆ ನಡೆದಿದೆ.

Advertisement

ನೀರು ಪಾಲಾದವನನ್ನು ಕಾಲುವೆ ಸಮೀಪ ಇರುವ ನಾಗಬೇನಾಳ ಗ್ರಾಮದ ಮಂಜುನಾಥ ಮಾದರ (28) ಎಂದು ಗುರುತಿಸಲಾಗಿದೆ.

ನಾರಾಯಣಪುರ ಚೆಕ್ ಪೋಸ್ಟ್ ಹತ್ತಿರ ಇರುವ ಈ ಕಾಲುವೆ ಬಳಿ ಕುರಿಗಳನ್ನು ಮೇಯಿಸಲು ಮಂಜುನಾಥ ಹೋಗಿದ್ದ. ಒಂದು ಕುರಿ ಮರಿ ಕಾಲುವೆಯಲ್ಲಿ ನೀರು ಕುಡಿಯಲು ಇಳಿದು ನೀರಿನ ರಭಸಕ್ಕೆ ಕಾಲುವೆಯಲ್ಲಿ ಹರಿದು ಹೋಗತೊಡಗಿತ್ತು. ಇದನ್ನು ರಕ್ಷಿಸಲು ಕಾಲುವೆಗೆ ಜಿಗಿದಿದ್ದಾನೆ. ಈ ವೇಳೆ ಕುರಿಮರಿ ರಕ್ಷಣೆ ಮಾಡಿದ್ದರೂ ತಾನು ಮೇಲೆ ಬರಲಾಗದೆ ಕಾಲುವೆಯ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ ಎಂದು ಮೂಲಗಳು ತಿಳಿಸಿದೆ.

ಸ್ಥಳಕ್ಕೆ ಬಸವನ ಬಾಗೇವಾಡಿ ಡಿಎಸ್ಪಿ ಬಲ್ಲಪ್ಪ ನಂದಗಾವಿ, ಮುದ್ದೇಬಿಹಾಳ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸೈ ಸಂಜಯ್ ತಿಪ್ಪಾರೆಡ್ಡಿ, ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು ಶವಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next