Advertisement

ಒಂದೇ ದಿನದಲ್ಲಿ ನೆಗೆಟಿವ್‌ ವರದಿ ಕಡ್ಡಾಯ ಆದೇಶ ವಾಪಸ್‌ ಪಡೆದ ಜಿಲ್ಲಾಧಿಕಾರಿ

12:46 PM Apr 10, 2021 | Team Udayavani |

ಮೈಸೂರು: ಜಿಲ್ಲಾದ್ಯಂತ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಗುರುವಾರ ಹೊರಡಿಸಲಾಗಿದ್ದ ಆದೇಶವನ್ನು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಿಂಪಡೆದಿದ್ದಾರೆ. ಜತೆಗೆ ಕೋವಿಡ್ ತಡೆಗಾಗಿ ಕಠಿಣ ನಿಯಮ ಜಾರಿಗೊಳಿಸಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

Advertisement

ಕೋವಿಡ್ ಟಫ್ ರೂಲ್ಸ್ ನಿಯಮ ಜಾರಿ ಸಂಬಂಧ ಗುರುವಾರ ಸುದ್ದಿಗೋಷ್ಠಿ ನಡೆಸಿದ್ದ ಜಿಲ್ಲಾಧಿಕಾರಿ ಕೋವಿಡ್ ಹೆಚ್ಚಳ ಹಿನ್ನೆಲೆ, ಏ.10 ರಿಂದ 20ರವೆರೆಗೆ ಮೈಸೂರಿನ ಪ್ರವಾಸಿ ತಾಣಗಳು, ದೇಗುಲ, ರೆಸಾರ್ಟ್‌, ಹೋಟೆಲ್, ಚಿತ್ರಮಂದಿರಗಳಿಗೆ ಕೋವಿಡ್‌ ಟೆಸ್ಟ್ ರಿಪೋರ್ಟ್‌ ಕಡ್ಡಾಯ ಎಂದು ಆದೇಶಿಸಿದ್ದರು. ಹಾಗೆಯೇ ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವ ವ್ಯಕ್ತಿಗಳು ಕೋವಿಡ್‌ -19 ನೆಗೆಟಿವ್‌ ರಿಪೋರ್ಟ್‌ ಹೊಂದಿರುವುದು ಸೂಕ್ತ ಎಂದು ಸಲಹೆ ನೀಡಿದ್ದರು.

ಇದರ ಬೆನ್ನಲ್ಲೇ ಕೋವಿಡ್ ಕಠಿಣ ನಿಯಮಗಳ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಸುತ್ತೋಲೆ ಹೊರಡಿಸಿದ ಹಿನ್ನೆಲೆ

ಮೈಸೂರು ಡೀಸಿ ರೋಹಿಣಿ ಸಿಂಧೂರಿ ಅವರು ತಮ್ಮ ಆದೇಶ ಹಿಂಪಡೆದಿದ್ದಾರೆ. ತಮ್ಮ ಆದೇಶ ಹಿಂಪಡೆದ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಜಿಲ್ಲಾಧಿಕಾರಿ ಸಿಂಧೂರಿ, ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವ ವ್ಯಕ್ತಿಗಳು ಕೋವಿಡ್‌-19 ನೆಗೆಟಿವ್‌ ರಿಪೋರ್ಟ್‌ ಹೊಂದಿರಲು ಸಲಹಾ ಸೂಚನೆ ನೀಡಲಾಗಿತ್ತು. ಸಾರ್ವಜನಿಕರಲ್ಲಿ ಸಲಹಾ ಸೂಚನೆ ಬಗ್ಗೆ ಗೊಂದಲ ಉಂಟಾಗಿದೆ. ಅಲ್ಲದೆ ಸರ್ಕಾರದ ಸುತ್ತೋಲೆಯಲ್ಲಿ ಕೊವಿಡ್‌ -19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತ್ಯೇಕ ಆದೇಶಗಳನ್ನು ಹೊರಡಿಸದಂತೆ ಹೇಳಿದೆ. ಈಗಾಗಲೇ ಇಂತಹ ಆದೇಶ, ಸೂಚನೆ ಹೊರಡಿಸಿದ್ದಲ್ಲಿ ತಕ್ಷಣವೇ ಹಿಂಪಡೆಯಲು ನಿರ್ದೇಶಿಸಿದೆ.

ಆದ್ದರಿಂದ ಹೊರಡಿಸಲಾಗಿರುವ ಸಲಹಾ ಸೂಚನೆಯನ್ನು ತಕ್ಷಣದಿಂದ ಹಿಂಪಡೆಯಲಾಗಿದೆ. ಸರ್ಕಾರದ ಸಲಹಾ ಸೂಚನೆಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕೋರಿ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next