Advertisement

ವೈದ್ಯರ ನಿರ್ಲಕ್ಷ್ಯ: ಹೆರಿಗೆ ವೇಳೆ ಮಗು ಸಾವು

11:07 AM Feb 14, 2019 | Team Udayavani |

ಕೆಜಿಎಫ್: ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ಸಮಯದಲ್ಲಿ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಕುಟುಂಬಸ್ಥರು ಮತ್ತು ಸಾರ್ವಜನಿಕರು ಆಸ್ಪತ್ರೆ ಮುಂಭಾಗ ಧರಣಿ ಪ್ರತಿಭಟನೆ ನಡೆಸಲಾಯಿತು.

Advertisement

ಮಾಲೂರು ತಾಲೂಕಿನ ಮದನಹಳ್ಳಿ ಗ್ರಾಮದ ನಿವಾಸಿ ಅರುಣ್‌ಕುಮಾರ್‌ ಪತ್ನಿ ಸುಮಲತಾ ತವರಾದ ಬಂಗಾರಪೇಟೆ ತಾಲೂಕಿನ ಕೇತಗಾನಹಳ್ಳಿ ಗ್ರಾಮಕ್ಕೆ ಬಂದಿದ್ದರು. ಹೆರಿಗೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಕೆಜಿಎಫ್ನ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಹೆರಿಗೆ ಆಸ್ಪತ್ರೆಗೆ ದಾಖಲಿಸಿದ್ದರು. ಗರ್ಭಿಣಿಯನ್ನು ಪರೀಕ್ಷಿಸಿದ ವೈದ್ಯೆ ಡಾ.ಸುಧಾರಾಣಿ ಎಲ್ಲಾ ನಾರ್ಮಲ್‌ ಆಗಿದೆ ಎಂದು ತಿಳಿಸಿ ದಾಖಲಿಸಿಕೊಂಡಿದ್ದರು. ಬುಧವಾರ ಮುಂಜಾನೆ ಹೆರಿಗೆ ನೋವು ಕಾಣಿಸಿಕೊಂಡಾಗ ಸುಮಲತಾರಿಗೆ ವಿಪರೀತ ಹೊಟ್ಟೆನೋವಿನಿಂದ ನರಳಾಡಿದ್ದಾರೆ. ವೈದ್ಯರು ಪರೀಕ್ಷಿಸಿ ಮಗು ಹೊಟ್ಟೆಯಲ್ಲಿ ಕೊಳಚೆ ನೀರು ಕುಡಿದು ಬಿಟ್ಟಿದೆ ಕೂಡಲೇ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು 5.15ರ ವೇಳೆಗೆ ತಿಳಿಸಿದ್ದಾರೆ.

ಪತಿ ಅರುಣ್‌ಕುಮಾರ್‌ ಕೂಡಲೇ ಆಪರೇಷನ್‌ಗೆ ಒಪ್ಪಿಗೆ ನೀಡಿದ್ದಾರೆ. ಆದರೆ ವೈದ್ಯರು 8.45ರ ವೇಳೆಗೆ ಆಪರೇಷನ್‌ ಮಾಡಿ ಮಗುವನ್ನು ಹೊರ ತೆಗೆದಾಗ ಮಗು ಮೃತಪಟ್ಟಿತ್ತು. ಇದರಿಂದ ರೊಚ್ಚಿಗೆದ್ದ ಪತಿ ಅರುಣ್‌ಕುಮಾರ್‌ ಮತ್ತು ಕುಟುಂಬಸ್ಥರು ವೈದ್ಯರು ಕೂಡಲೇ ಆಪರೇಷನ್‌ ಮಾಡದೆ
ಮೂರು ಗಂಟೆ ವಿಳಂಬ ಮಾಡಿದ ಕಾರಣದಿಂದ ಮಗು ಮೃತಪಟ್ಟಿದೆ. ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ನಮಗೆ ನ್ಯಾಯ ಸಿಗಬೇಕು ಎಂದು ಆಸ್ಪತ್ರೆ ಮುಂಭಾಗ ಹೋರಾಟ ಪ್ರತಿಭಟನೆ ಮಾಡಿದರು.

ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಲಂಚಕ್ಕಾಗಿ ಪೀಡಿಸುತ್ತಾರೆ. ಹಣಕೊಟ್ಟರೆ ರೋಗಿಗಳನ್ನ ಚೆನ್ನಾಗಿ ನೋಡುತ್ತಾರೆ. ನಮ್ಮಿಂದ ಸಹ 50 ಸಾವಿರ ಲಂಚ ಕೇಳಿದರು ನೀಡದಿದ್ದಕ್ಕೆ ಮಗು ಕಳೆದು ಕೊಳ್ಳುವಂತಾಗಿದೆ ಎಂದು ವೈದ್ಯರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸ್ಥಳಕ್ಕಾಗಮಿಸಿದ ರಾಬರ್ಟ್‌ ಸನ್‌ಪೇಟೆ ಪೊಲೀಸರು ಕುಟುಂಬಸ್ಥರನ್ನು ಸಮಾಧಾನ ಮಾಡಿ ಕ್ರಮಜರುಗಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು. 

Advertisement
Advertisement

Udayavani is now on Telegram. Click here to join our channel and stay updated with the latest news.

Next