Advertisement

ಆಶಾ ಕಾರ್ಯಕರ್ತೆಯರ ಜತೆ ಮಾತುಕತೆ: ಮೂಡದ ಒಮ್ಮತ

09:55 AM Sep 06, 2017 | Team Udayavani |

ಬೆಂಗಳೂರು: ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆ ಸಂಬಂಧ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳ ಜತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್‌ ಕುಮಾರ್‌ ಹಾಗೂ ಅಧಿಕಾರಿಗಳು ನಡೆಸಿದ ಸಂಧಾನ ಮಾತುಕತೆ ‘ಫ‌ಲ’ ಕೊಟ್ಟಿಲ್ಲ.

Advertisement

ತೆಲಂಗಾಣ ಮಾದರಿಯಲ್ಲಿ ಮಾಸಿಕ 6 ಸಾವಿರ ರೂ. ವೇತನ ನಿಗದಿಗೆ ಆಶಾ ಕಾರ್ಯಕರ್ತೆರ ಸಂಯುಕ್ತ ಸಂಘ ಪಟ್ಟು ಹಿಡಿದಿದ್ದು, ತಾಂತ್ರಿಕ ಕಾರಣಗಳಿಂದ ಸಾಧ್ಯವಿಲ್ಲ ಎಂದು ಸರಕಾರ ಹೇಳುತ್ತಿದೆ. ಬುಧವಾರವೂ ಮಾತುಕತೆ ಮುಂದುವರಿಯಲಿದ್ದು, ಸರಕಾರ ನಮ್ಮ ಬೇಡಿಕೆಗೆ ಒಪ್ಪದಿದ್ದರೆ ಸೆ. 7ರಿಂದ 37 ಸಾವಿರ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟ ಮುಷ್ಕರ ಪ್ರಾರಂಭಿಸುವುದಾಗಿ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಮಾಸಿಕ 6 ಸಾವಿರ ರೂ. ನಿಗದಿತ ವೇತನ ನೀಡುವುದು ಸಹಿತ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ. 7ರಿಂದ ಮುಷ್ಕರ ನಡೆಸುವುದಾಗಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್‌ ಕುಮಾರ್‌ ಅವರು ಸಂಘದ ಪದಾಧಿಕಾರಿಗಳ ಜತೆ ಮಂಗಳವಾರ ಮೊದಲ ಸುತ್ತಿನ ಮಾತುಕತೆ ನಡೆಸಿದರು. ಅನಂತರ ಅಧಿಕಾರಿಗಳೊಂದಿಗೂ ಎರಡನೇ ಸುತ್ತಿನ ಮಾತುಕತೆ ನಡೆಸಿದರು. ಆದರೂ ಮಾತುಕತೆ ಯಶಸ್ವಿಯಾಗಲಿಲ್ಲ. ಬುಧವಾರ ಮತ್ತೂಂದು ಸುತ್ತಿನ ಮಾತುಕತೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next