Advertisement

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

11:44 PM Apr 27, 2024 | Team Udayavani |

ಧಾರವಾಡ: ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ರಾಜ್ಯದ ಗೃಹ ಸಚಿವರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರ ಹೇಳಿಕೆಗಳು ಸರಿಯಾಗಿ ಇರಲಿಲ್ಲ. ತನಿಖೆ ನಡೆಸುವ ಮುಂಚೆಯೇ ನೀಡುವ ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ ಎಂದು ನಿವೃತ್ತ ಹಿರಿಯ ಪೊಲೀಸ್‌ ಅಧಿಕಾರಿ ಜ್ಯೋತಿ ಪ್ರಕಾಶ ಮಿರ್ಜಿ ಹೇಳಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಗತ್ಯ ತನಿಖೆ ನಡೆಯುವವರೆಗೂ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ಬಗ್ಗೆ ಮಾತನಾಡಬಾರದು. ರಾಜ್ಯದ ಪೊಲೀಸರೇ ಸಮರ್ಥರಿದ್ದು, ಇಲ್ಲಿನ ಯಾವುದೇ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವ ಅಗತ್ಯವಿಲ್ಲ. ಇಂತಹ ಪ್ರಕರಣಗಳು ನಡೆದಾಗ ಸೂಕ್ಷ್ಮತೆ ಅರಿತು ಸರಕಾರಗಳು ಹೇಳಿಕೆ ನೀಡಬೇಕಾಗುತ್ತದೆ. ಕರ್ನಾಟಕ ಪೊಲೀಸ್‌ ಇಂದಿಗೂ ಶಕ್ತಿಶಾಲಿಯಾಗಿದೆ. ನೇಹಾ ಪ್ರಕರಣ ನಿಷ್ಪಕ್ಷಪಾತ ತನಿಖೆ ನಡೆದು ಸತ್ಯ ಹೊರಗೆ ಬರುವವರೆಗೂ ಎಲ್ಲರೂ ಕಾಯಬೇಕು ಎಂದು ಹೇಳಿದರು.

ಜೆಡಿಎಸ್‌-ಬಿಜೆಪಿ ಮೈತ್ರಿ ರಾಜ್ಯದಲ್ಲಿ ಅತ್ಯಂತ ಫಲಪ್ರದವಾಗಿದ್ದು, 28 ಸ್ಥಾನಗಳೂ ಮೈತ್ರಿ ಪಾಲಾಗಲಿವೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಧಾರವಾಡ ಕ್ಷೇತ್ರಕ್ಕೆ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರು ಗೆದ್ದರೆ ಅಭಿವೃದ್ಧಿ ಯೋಜನೆಗಳಿಗೆ ಅನುಕೂಲವಾಗಲಿದೆ. ಲಿಂಗಾಯತರಿಗೆ ಪ್ರಹ್ಲಾದ ಜೋಶಿ ಅವರು ಅನ್ಯಾಯ ಮಾಡಿದ್ದಾರೆ ಎಂಬುದು ಸಾಮಾನ್ಯ ಆರೋಪ. ಆದರೆ, ವ್ಯಕ್ತಿಗತವಾಗಿ ಯಾವ ರಾಜಕಾರಣಿಗಳೂ ಈ ಬಗ್ಗೆ ಹೇಳಿಲ್ಲ ಎಂದರು.

ನೇಹಾ ಹಂತಕನ ರಕ್ತದ ಮಾದರಿ ಪಡೆದ ಸಿಐಡಿ
ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹಂತಕ ಫಯಾಜ್‌ನ ರಕ್ತದ ಮಾದರಿಯನ್ನು ಸಿಐಡಿ ತನಿಖಾಧಿಕಾರಿಗಳು ಶನಿವಾರ ನ್ಯಾಯಾಧೀಶರ ಸಮ್ಮುಖದಲ್ಲಿ ಸಂಗ್ರಹಣೆ ಮಾಡಿದರು. ಪ್ರಕರಣದ ತನಿಖೆ ಸಂದರ್ಭ ಅಧಿಕಾರಿಗಳಿಗೆ ಕೃತ್ಯ ನಡೆದ ಸ್ಥಳದಲ್ಲಿ ಹಾಗೂ ಆಪಾದಿತ ಕೊಲೆ ಮಾಡಲು ಬಳಸಿದ್ದ ಚಾಕುವಿನ ಮೇಲೆ ಎರಡು ರಕ್ತದ ಗುಂಪುಗಳು ಕಂಡುಬಂದ ಹಿನ್ನೆಲೆಯಲ್ಲಿ ಅದನ್ನು ದೃಢಪಡಿಸಿಕೊಳ್ಳಲು ಫಯಾಜ್‌ನ ಡಿಎನ್‌ಎ ಪರೀಕ್ಷೆ ನಡೆಸಬೇಕಾಗುತ್ತದೆ. ಅದಕ್ಕೆ ಅನುಮತಿ ನೀಡಬೇಕೆಂದು ತನಿಖಾಧಿಕಾರಿಗಳು ಇಲ್ಲಿನ ಒಂದನೇ ಹೆಚ್ಚುವರಿ ದಿವಾಣಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ನ್ಯಾಯಾಧೀಶರು ಪರಿಗಣಿಸಿದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಆಪಾದಿತನನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಸಿಐಡಿ ಅಧಿಕಾರಿಗಳು ಫಯಾಜ್‌ನ ಡಿಎನ್‌ಎ ಪರೀಕ್ಷೆ ಜತೆಗೆ ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಸಿಐಡಿ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಮೇರೆಗೆ ಫಯಾಜ್‌ನನ್ನು ಹೆಚ್ಚಿನ ವಿಚಾರಣೆಗಾಗಿ ಎ. 29ರವರೆಗೆ ತಮ್ಮ ವಶಕ್ಕೆ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next