Advertisement

Karnataka BJP ಇಂದು ರಾಜ್ಯಾದ್ಯಂತ ಬಿಜೆಪಿ ರಣಕಹಳೆ; ಹದಗೆಟ್ಟ ಕಾನೂನು ಸುವ್ಯವಸ್ಥೆ 

11:54 PM Apr 21, 2024 | Team Udayavani |

ಬೆಂಗಳೂರು/ಹುಬ್ಬಳ್ಳಿ: ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮಿತಿಮೀರುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ವಿಪಕ್ಷ ಬಿಜೆಪಿ ಆರೋಪಿಸಿದ್ದು, ಸೋಮವಾರ ರಾಜ್ಯಾದ್ಯಂತ ಭಾರೀ ಪ್ರತಿಭಟನೆ ನಡೆಸಲು ಮುಂದಾಗಿದೆ. ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆ, ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಘಟನೆಗಳನ್ನು ಮುಖ್ಯವಾಗಿ ಇರಿಸಿಕೊಂಡು ಪ್ರತಿಭಟನೆ ನಡೆಯಲಿದೆ.

Advertisement

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪರ ಪ್ರಚಾರ ಕ್ಕೆಂದು ಆಗಮಿ ಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನೇಹಾ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಇನ್ನೊಂದೆಡೆ ರಾಜ್ಯದ ಕಾನೂನು ಸುವ್ಯವಸ್ಥೆ ವಿಚಾರವಾಗಿ ಬೆಂಗಳೂರಿನಲ್ಲಿ ಜಂಟಿ ಪತ್ರಿಕಾ ಗೋಷ್ಠಿ ನಡೆಸಿದ ಮಾಜಿ ಸಿಎಂಗಳಾದ ಯಡಿಯೂರಪ್ಪ, ಸದಾನಂದ ಗೌಡ ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದರು. ಬಿಜೆಪಿಯ ಬಹುತೇಕ ನಾಯಕರು ಕಾನೂನು ಸುವ್ಯವಸ್ಥೆಗೆ ಹಾಳಾಗಿದೆ ಎಂದು ಖಂಡನೆ ವ್ಯಕ್ತಪಡಿಸುತ್ತಿದ್ದು, ಸೋಮವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಿ ದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕರೆ ಕೊಟ್ಟಿದ್ದಾರೆ.

ರಾಜ್ಯದಲ್ಲಿ ತುಘಲಕ್‌ ದರ್ಬಾರ್‌
ಸಿದ್ದರಾಮಯ್ಯ ಸರಕಾರ ದಿವಾಳಿ ಆಗಿದೆ. ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಹಣ ನೀಡುತ್ತಿಲ್ಲ. ಜನಹಿತ ಮರೆತು ತುಘಲಕ್‌ ದರ್ಬಾರ್‌ ನಡೆಸು ತ್ತಿರುವ ಸರಕಾರಕ್ಕೆ ಜನರೇ ಛೀಮಾರಿ ಹಾಕುತ್ತಿದ್ದಾರೆ. ಕೈಯಲ್ಲಿ ಅಧಿಕಾರ ಇದೆ. ಆದರೂ ಅವರು ಹೋದ ಕಡೆ ಜನ ಸೇರುತ್ತಿಲ್ಲ.
-ಯಡಿಯೂರಪ್ಪ, ಮಾಜಿ ಸಿಎಂ

ಹಿಂದೂಗಳು 3ನೇ ದರ್ಜೆ ನಾಗರಿಕರು
ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದ ಅನಂತರ ಹಿಂದೂಗಳನ್ನು ತೃತೀಯ ದರ್ಜೆ ನಾಗರಿಕರಂತೆ ನೋಡುವ ಕೆಟ್ಟ ವಾತಾವರಣ ನಿರ್ಮಾಣವಾಗಿದೆ. ರಾಜ್ಯದಲ್ಲಿ ಈ ಬಾರಿಯ ಚುನಾವಣೆ ಭಯೋತ್ಪಾದಕರ ಹಾಗೂ ಹಿಂದೂ ಧಾರ್ಮಿಕ ವಿಚಾರಗಳನ್ನು ಅನುಷ್ಠಾನ ಮಾಡುವ ಪ್ರಾಮಾಣಿಕ ಮತ್ತು ಸಾಮಾನ್ಯ ಕಾರ್ಯಕರ್ತರ ನಡುವಣ ಹೋರಾಟದಂತೆ ಕಾಣುತ್ತಿದೆ.
-ಡಿ.ವಿ. ಸದಾನಂದ ಗೌಡ, ಮಾಜಿ ಸಿಎಂ

Advertisement
Advertisement

Udayavani is now on Telegram. Click here to join our channel and stay updated with the latest news.

Next