Advertisement

ಬಲಿಷ್ಠ ಭಾರತಕ್ಕೆ ನೆಹರೂ ಕಾರಣ

11:35 AM Nov 15, 2017 | Team Udayavani |

ಬೆಂಗಳೂರು: ಭಾರತ ಬಲಿಷ್ಠವಾಗಿ ಬೆಳೆಯಲು ಮಾಜಿ ಪ್ರಧಾನಿ ದಿ. ಜವಹರ್‌ಲಾಲ್‌ ನೆಹರೂ ಕಾರಣ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಜವಹರ್‌ಲಾಲ್‌ ನೆಹರು ಜನ್ಮ ದಿನದ ಅಂಗವಾಗಿ ಮಂಗಳವಾರ ವಿಧಾನಸೌಧದಲ್ಲಿ ನೆಹರೂ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

Advertisement

ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜನ್ಮ ದಿನ ಇಂದು. ಈ ದೇಶ ಬಲಿಷ್ಠವಾಗಲು ಅಡಿಗಲ್ಲು ಹಾಕಿದವರು ನೆಹರೂ. ಅದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಬೆಂಗಳೂರಿಗೆ ನೆಹರೂ ಕೊಡುಗೆ ಅಪಾರ ಎಂದರು. ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ಕೇಳುತ್ತಿರುವ ಬಿಜೆಪಿಗೆ ತೀರುಗೇಟು ನೀಡಿದ ರೆಡ್ಡಿ, ಈ ಮೊದಲು ಜಾರ್ಜ್‌ ವಿರುದ್ಧ ಎಫ್ಐಆರ್‌ ದಾಖಲಾಗಿತ್ತು.

ಆಗ ಅವರು ರಾಜೀನಾಮೆ ಕೊಟ್ಟಿದ್ದಾರೆ. ಇದೀಗ ಸಿಬಿಐ ಕೂಡ ಅದೇ ಎಫ್ಐಆರ್‌ ಅನ್ನೇ ದಾಖಲಿಸಿಕೊಂಡಿದೆ. ಹೀಗಾಗಿ ಮತ್ತೂಮ್ಮೆ ರಾಜೀನಾಮೆ ನೀಡುವ ಅಗತ್ಯವಿಲ್ಲ. ಸರ್ಕಾರ ಜಾರ್ಜ್‌ ಪರವಾಗಿ ನಿಲ್ಲುತ್ತದೆ. ಬಿಜೆಪಿಯವರು ಚುನಾವಣೆಗೋಸ್ಕರ ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಗೌರಿ ಲಂಕೇಶ್‌ ಹತ್ಯೆ ಕುರಿತ ಪ್ರಶ್ನೆಗೆ ಉತ್ತರಿಸಿದ ರಾಮಲಿಂಗಾರೆಡ್ಡಿ, ಮಾಧ್ಯಮಗಳಲ್ಲಿ ಗೌರಿ ಲಂಕೇಶ್‌ ಹಂತಕರ ಕುರಿತ ಚರ್ಚೆ ಬೇಡ. ಸಮಯ ಬಂದಾಗ ನಾನೇ ಹೇಳುತ್ತೇನೆ. ನಮ್ಮ ಪ್ರಯತ್ನ ನಾವು ಮಾಡುತ್ತಿದ್ದೇವೆ. ಹಾಗೆಯೇ ಎಸ್‌ಐಟಿ ಕೂಡ ಚುರುಕಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next