Advertisement

ರಾಜಘಾಟ್‌ನಲ್ಲಿ ನೆಹರು ಮನೆತನದ ನಾಯಿ, ಬೆಕ್ಕಿಗೂ ಜಾಗ

06:51 AM May 16, 2019 | Team Udayavani |

ಕಲಬುರಗಿ: ನವದೆಹಲಿಯ ರಾಜಘಾಟ್‌ನಲ್ಲಿ ನೆಹರು ಮನೆತನದ ಬೆಕ್ಕು-ನಾಯಿಗಳಿಗೂ ಘಾಟ್‌ಗಳಿವೆ. ಆದರೆ, ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್‌ ಅವರ ಅಂತ್ಯಸಂಸ್ಕಾರಕ್ಕೆ ಕಾಂಗ್ರೆಸ್‌ನವರು ಜಾಗ ಕೊಡಲಿಲ್ಲ ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ ಆರೋಪಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, “ಸಂವಿಧಾನ ಬದಲಾವಣೆ ಬಗ್ಗೆ ನಾನು ಎಲ್ಲೂ ಮಾತಾಡಿಲ್ಲ. ದೇಶದಲ್ಲಿ ಏಕರೂಪ ನಾಗರಿಕ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದೇನೆ. ಸಂವಿಧಾನ ಬದಲಾವಣೆ ಬಗ್ಗೆ ನಾನು ನೀಡಿರುವ ಹೇಳಿಕೆಯನ್ನು ಸಾಕ್ಷಿ ಸಮೇತ ತೋರಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ’ ಎಂದರು.

“ಬಿಜೆಪಿಯಿಂದ ಒಬ್ಬನೇ ಒಬ್ಬ ಶಾಸಕ ಕಾಂಗ್ರೆಸ್‌ಗೆ ಹೋಗುವುದಿಲ್ಲ. ಮುಳುಗುತ್ತಿರುವ ಹಡಗಿನಲ್ಲಿ ಯಾರೂ ಹೋಗಲ್ಲ. ಪ್ರಿಯಾಂಕ್‌ ಖರ್ಗೆ ಅವರಿಗೆ ಯೌವ್ವನ, ಅಧಿಕಾರ ಹಾಗೂ ಶ್ರೀಮಂತಿಕೆ ಒಟ್ಟಿಗೆ ಕೂಡಿ ಬಂದಿದೆ. ಈ ಮೂರೂ ಕೂಡಿದಲ್ಲಿ ಕಣ್ಣಿಗೆ ಬೇರೇನೂ ಕಾಣುವುದಿಲ್ಲ. ಹೀಗಾಗಿ, ಮೋದಿ ಕುರಿತಾಗಿ ಅಸಹ್ಯವಾಗಿ ಮಾತನಾಡಿದ್ದಾರೆ’ ಎಂದು ಟೀಕಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next