Advertisement

Nejar Case: ನಾಲ್ವರ ಬರ್ಬರ ಹತ್ಯೆ ಪ್ರಕರಣ; ಕೇರಳದಲ್ಲಿ ಆರೋಪಿಯ ಸುಳಿವು?

05:38 PM Nov 14, 2023 | Team Udayavani |

ಉಡುಪಿ: ನೇಜಾರಿನಲ್ಲಿ ರವಿವಾರ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೇರಳದಲ್ಲಿ ಬೀಡು ಬಿಟ್ಟಿದ್ದಾನೆ ಎಂಬ  ಮಾಹಿತಿ ಇದ್ದು, ಆ ಹಿನ್ನೆಲೆಯಲ್ಲಿ ಉಡುಪಿ ಪೊಲೀಸರ ತಂಡ ಮಂಗಳವಾರ(ನ.14 ರಂದು) ಕೇರಳದ ಕೊಟ್ಟಾಯಂಗೆ ತೆರಳಿದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಉಡುಪಿ ಡಿವೈಎಸ್‌ಪಿ ದಿನಕರ್ ಪಿ, ನೇತೃತ್ವದ ತಂಡ  ಅಲ್ಲಿಗೆ ತೆರಳಿದ್ದು, ಆರೋಪಿಯನ್ನು ಬಂಧಿಸಿ ಕರೆತರುವ ಸಾಧ್ಯತೆಗಳಿವೆ.

ನೇಜಾರು ತೃಪ್ತಿ ಲೇಔಟ್‌ನಲ್ಲಿ ರವಿವಾರ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೂಡಲೇ 5 ತಂಡಗಳನ್ನು ರಚಿಸಿದ್ದು, ಸಿಸಿಟಿವಿ ಜಾಡು ಹಿಡಿದು ತನಿಖೆಯನ್ನು ಚುರುಕುಗೊಳಿಸಿದ್ದರು.

ಕೊಲೆಗೈದ ಬಳಿಕ ಹಂತಕ ಸಾಗಿರುವ ವಿವಿಧ ಪ್ರದೇಶಗಳ ಸಿಸಿಟಿವಿ ಫುಟೇಜ್ ಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದರು. ಸಂತೆಕಟ್ಟೆಯಿಂದ ಉಡುಪಿ ಕರಾವಳಿ ಬೈಪಾಸ್, ಅಲ್ಲಿಂದ ಅಂಬಲಪಾಡಿ, ಕಿನ್ನಿಮುಲ್ಕಿ, ಬಲಾಯಿಪಾದೆ ಹಾಗೂ ಉದ್ಯಾವರದ ಮೂಲಕ ಕಟಪಾಡಿವರೆಗೆ ಸಾಗಿರುವ ಸಿಸಿಟಿವಿ ದ್ರಶ್ಯಾವಳಿಗಳ  ಜಾಡು ಹಿಡಿದ ಪೊಲೀಸರ ತಂಡವು ಕಾಸರಗೋಡು, ಕೇರಳ ಕಡೆ ತೆರಳಿ ವ್ಯಾಪಕ ಶೋಧ ನಡೆಸಿದ್ದರು. ಆರೋಪಿಯ ಬಂಧನದ ಬಳಿಕವಷ್ಟೇ ಹೆಚ್ಚಿನ ವಿವರಗಳು ತಿಳಿದುಬರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next