Advertisement

Nejaru: ತಾಯಿ, ಮಕ್ಕಳ ಹತ್ಯೆ ಪ್ರಕರಣ ಪ್ರಕರಣ ಜಿಲ್ಲಾ ನ್ಯಾಯಾಲಯಕ್ಕೆ

10:47 PM Feb 15, 2024 | Team Udayavani |

ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿರುವ ಹಿನ್ನೆಲೆಯಲ್ಲಿ ಉಡುಪಿಯ ಪ್ರಧಾನ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಆರಂಭಿಸಲು ಪ್ರಕರಣವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಇಂದು ಒಪ್ಪಿಸಿತು.

Advertisement

ಉಡುಪಿಯ ಪ್ರಧಾನ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ದೋಷಾರೋಪಣೆ ಪಟ್ಟಿಯ ಪರಿಶೀಲನೆ ಪೂರ್ಣಗೊಂಡ ಬಳಿಕ ಆರೋಪಿ ವಕೀಲರಿಗೆ 15 ಸಂಪುಟಗಳ 2202 ಪುಟಗಳ ದೋಷಾರೋಪಣೆ ಪಟ್ಟಿಯನ್ನು ನೀಡಲಾಯಿತು.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ಪ್ರವೀಣ್‌ ಚೌಗುಲೆಯನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್‌ ಆಳ್ವ ಹಾಗೂ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್‌.ಎಂ. ನದಾಫ್ ಹಾಜರಿದ್ದರು.

ಮುಂದೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಈ ಪ್ರಕರಣಕ್ಕೆ ಸೆಶನ್ಸ್‌ ಕೇಸು (ಎಸ್‌ಸಿ) ನಂಬರ್‌ ನೀಡಲಾಗುತ್ತದೆ. ಅನಂತರ ಆರೋಪಿಯನ್ನು ಮುಂದಿನ ವಿಚಾರಣೆಗೆ ಹಾಜರುಪಡಿಸುವಂತೆ ನ್ಯಾಯಾಲಯ ಕಾರಾಗೃಹಕ್ಕೆ ನೋಟಿಸು ಜಾರಿ ಮಾಡುತ್ತದೆ. ಆದುದರಿಂದ ಆರೋಪಿ ಪ್ರವೀಣ್‌ ಚೌಗುಲೆಯನ್ನು ಮುಂದಿನ ವಿಚಾರಣೆ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕೋರ್ಟಗೆ ಹಾಜರು ಪಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next