Advertisement

ನೆಲಮಂಗಲ: ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾದ ರಥೋತ್ಸವ

05:49 PM Mar 25, 2022 | Team Udayavani |

ನೆಲಮಂಗಲ: ತಾಲ್ಲೂಕಿನ ದೇವರಹೊಸಹಳ್ಳಿಯ ಶ್ರೀ ಭದ್ರಕಾಳಮ್ಮ, ಶ್ರೀ ವೀರಭದ್ರಸ್ವಾಮಿ ದೇವಾಲಯ ಜಾತ್ರಾ ಮಹೋತ್ಸವ ಹಿಂದೂ-ಮುಸ್ಲಿಂ ಸೌಹಾರ್ದತೆಗೆ ಕಾರಣವಾಗಿ ರಾಜ್ಯದ ಗಮನ ಸೆಳೆದಿದೆ.

Advertisement

ಪುರಾತನ ಇತಿಹಾಸವಿರುವ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯದಬ್ರಹ್ಮರಥೋತ್ಸವದಲ್ಲಿ ಮುಸ್ಲಿಮ್ ವ್ಯಾಪಾರಿಗಳ ಅಂಗಡಿಗಳಿಗೆ ಈ ಹಿಂದಿನಂತೆ ಅವಕಾಶ ನೀಡಲಾಗಿತ್ತು. ಹೂವು, ಹಣ್ಣು, ಕಬ್ಬಿನ ಹಾಲು, ಆಭರಣ ಮಾದರಿಗಳ ಮಾರಾಟ ಸೇರಿ ಎಲ್ಲಾ ಅಂಗಡಿಗಳಲ್ಲಿ ಮುಸ್ಲಿಂ ಸಮುದಾಯದ ಅಂಗಡಿಗಳಿಗೆ ಅವಕಾಶ ನೀಡಲಾಗಿತ್ತು.

ಐದಾರು ಜಿಲ್ಲೆಗಳಿಂದ ಬಂದಿದ್ದ ಸಾವಿರಾರು ಜನರು ಜಾತ್ರೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಭಾವೈಕ್ಯತೆಯ ಸಂದೇಶ ರವಾನಿಸಿದರು.

ಡಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೊಡ್ಡ ರಥೋತ್ಸವ ಇದಾಗಿದ್ದು, ಪೊಲೀಸರು ಸಹಕರಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next