Advertisement

Budget;1 ಲಕ್ಷ ಬಡ, ಮಧ್ಯಮ ವರ್ಗದ ನಗರವಾಸಿಗಳಿಗೆ ಸೂರು; 2.2 ಲಕ್ಷ ಕೋ.ರೂ. ಉತ್ತೇಜನ ಘೋಷಣೆ

08:44 PM Jul 23, 2024 | Team Udayavani |

ಹೊಸದಿಲ್ಲಿ: ನಗರಗಳ ವಸತಿ ಯೋಜನೆಗೆ ಇನ್ನಷ್ಟು ಆದ್ಯತೆ ನೀಡಿರುವ ಕೇಂದ್ರ ಸರ್ಕಾರ 2.2 ಲಕ್ಷ ಕೋಟಿ ರೂ.ಗಳ ಉತ್ತೇಜನವನ್ನು ಘೋಷಿಸಿದೆ. 10 ಲಕ್ಷ ಕೋಟಿ ರೂ.ಗಳ ಹೂಡಿಕೆಯೊಂದಿಗೆ ನಗರಗಳ 1 ಕೋಟಿ ಬಡ ಮತ್ತು ಮಧ್ಯಮ ವರ್ಗಗಳಿಗೆ ವಸತಿ ಸೌಕರ್ಯ ಕಲ್ಪಿಸಲಾಗುವುದು.

Advertisement

ಜತೆಗೆ ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ಪಿಎಂಎವೈ) ಅಡಿಯಲ್ಲಿ ಇನ್ನೂ 3 ಕೋಟಿ ಮನೆಗಳನ್ನು ನಿರ್ಮಿಸುವ ಮೂಲಕ ಯೋಜನೆಯನ್ನು ವಿಸ್ತರಿಸುವುದಾಗಿ ಘೋಷಿಸಿದೆ. 2015ರ ಜೂನ್‌ನಲ್ಲಿ ಪ್ರಾರಂಭವಾದ ಈ ಯೋಜನೆ ಎಲ್ಲ ಅರ್ಹ ನಗರ ಫ‌ಲಾನುಭವಿಗಳಿಗೆ ಮೂಲಭೂತ ಸೌಕರ್ಯಗಳೊಂದಿಗೆ ಮನೆಗಳನ್ನು ಒದಗಿಸುವ ಗುರಿ ಹೊಂದಿದೆ. ಕಳೆದ ಫೆಬ್ರವರಿಯಲ್ಲಿ ಮಂಡಿಸಿದ್ದ ಮಧ್ಯಂತರ ಬಜೆಟ್‌ನಲ್ಲೂ ಪಿಎಂಎವೈಗೆ 80,671 ಕೋಟಿ ರೂ. ನಿಗದಿಪಡಿಸಲಾಗಿತ್ತು. ಅದಕ್ಕೂ ಹಿಂದಿನ ಬಜೆಟ್‌ಲ್ಲಿ 54,103 ಕೋಟಿ ರೂ. ಅನುದಾನ ಒದಗಿಸಲಾಗಿತ್ತು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ವಸತಿ ಕೊರತೆ ನೀಗಿಸಲು ಹೆಚ್ಚಿನ ಅನುದಾನ ನೀಡಿರುವುದು ನಗರವಾಸಿಗಳ ಅರ್ಹ ಫ‌ಲಾನುಭವಿಗಳಿಗೆ ನೆರವಾಗಲಿದೆ. ಕಳೆದ 10 ವರ್ಷಗಳಲ್ಲಿ 4.21 ಕೋಟಿ ಮನೆಗಳನ್ನು ನಿರ್ಮಿಸಿ ಫ‌ಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ.

ಮನೆ ಕಟ್ಟಲು ಬಡ್ಡಿ ಸಬ್ಸಿಡಿ
ನಗರವಾಸಿಗಳು ತಮ್ಮ ಕನಸಿನ ಮನೆಗಳನ್ನು ಕಟ್ಟಿಕೊಳ್ಳಲು ಕೈಗೆಟುಕುವ ದರದಲ್ಲಿ ಸಾಲ ನೀಡಲು ಅನುಕೂಲವಾಗುವಂತೆ ಬಡ್ಡಿ ಸಬ್ಸಿಡಿ ನೀಡಲೂ ಕೇಂದ್ರ ಯೋಜಿಸಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next