Advertisement

ನೇಪಾಳ ಅಧ್ಯಕ್ಷ Ramachandra Paudal ಭಾರತದ ಆಸ್ಪತ್ರೆಗೆ ದಾಖಲು

10:29 PM Apr 19, 2023 | Team Udayavani |

ನವದೆಹಲಿ: ನೇಪಾಳ ಅಧ್ಯಕ್ಷ ರಾಮಚಂದ್ರ ಪೌದಲ್‌ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಚಿಕಿತ್ಸೆಗಾಗಿ ಭಾರತಕ್ಕೆ ವಿಮಾನದಲ್ಲಿ ಕರೆ ತರಲಾಗಿದೆ.ನವೆದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೇ ತಿಂಗಳಿನಲ್ಲಿ 2ನೇ ಬಾರಿಗೆ ರಾಮಚಂದ್ರ ಭಾರತದ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಇತ್ತೀಚೆಗಷ್ಟೇ ತೀವ್ರ ಹೊಟ್ಟೆನೋವಿನ ಹಿನ್ನೆಲೆ ಭಾರತದ ಆಸ್ಪತ್ರೆಯಲ್ಲಿ ರಾಮಚಂದ್ರ ಚಿಕಿತ್ಸೆ ಪಡೆದುಕೊಂಡಿದ್ದರು. ಇದಾದ ಬಳಿಕ ಮಂಗಳವಾರದಿಂದಲೂ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಬುಧವಾರ ನೋವು ಹೆಚ್ಚಾದ ಹಿನ್ನೆಲೆ ನೇಪಾಳದಿಂದ ಭಾರತಕ್ಕೆ ಏರ್‌ ಆ್ಯಂಬುಲೆನ್ಸ್‌ ಮೂಲಕ ಅವರನ್ನು ಸ್ಥಳಾಂತರಿಸಲಾಗಿದೆ. ಏಮ್ಸ್‌ನ ತಜ್ಞ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next