Advertisement

ನೆರೂಲ್‌ ಗಣಪತಿ ಅಯ್ಯಪ್ಪ ದುರ್ಗಾದೇವಿ ಕ್ಷೇತ್ರ: ಬ್ರಹ್ಮಕಲಶೋತ್ಸವ

04:20 PM Jan 17, 2017 | |

ನವಿಮುಂಬಯಿ: ಶ್ರೀ  ಮಣಿಕಂಠ ಸೇವಾ ಸಂಘಂ ನೆರೂಲ್‌ ವತಿಯಿಂದ ನೆರೂಲ್‌ ಪೂರ್ವದ ಫೇಸ್‌ ನಂಬರ್‌-01, ನೆರೂಲ್‌ ಬಸ್‌ ಡಿಪ್ಪೋ ಸಮೀಪ, ನೆರೂಲ್‌ ರೈಲ್ವೇ ನಿಲ್ದಾಣ ರಸ್ತೆಯ, ಸೆಕ್ಟರ್‌-29, ಪ್ಲೋಟ್‌ ನಂಬರ್‌ 16ರಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಕ್ಷೇತ್ರದ ಅಷ್ಟಬಂಧ ಬ್ರಹ್ಮಕಲಶೋತ್ಸವವು ಸಮಾರಂಭವು ಜ. 15ರಂದು ಪ್ರಾರಂಭಗೊಂಡಿದ್ದು, ಜ. 22ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರಗಲಿದೆ.

Advertisement

ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಶ್ರೀ ಗುರುಪ್ರಸಾದ್‌ ಭಟ್‌ ಘನ್ಸೋಲಿ ಅವರ ಮಾರ್ಗದರ್ಶನದಲ್ಲಿ, ತಂತ್ರಿಗಳಾದ ವಿದ್ವಾನ್‌ ರಾಮಚಂದ್ರ ಬಾಯರಿ ಕಾರ್ಕಳ ಅವರ ನೇತೃತ್ವದಲ್ಲಿ ಕಳತ್ತೂರು ವೇದಮೂರ್ತಿ ಉದಯ ತಂತ್ರಿಗಳ ಉಪಸ್ಥಿತಿಯಲ್ಲಿ ವೇದಾಗಮ ತಜ್ಞರಾದ ಋತ್ವಿಜರ ಸಹಯೋಗದೊಂದಿಗೆ ನಿಗಮಾಗೋಮೋಕ್ತ ವಿಧಿ-ವಿಧಾನದಂತೆ ನಡೆಯಲಿದ್ದು, ಜ. 16ರಂದು ಬೆಳಗ್ಗೆ 9ರಿಂದ ಋತ್ವಿಜರ ಸ್ವಾಗತ, ಶಿಲ್ಪಿ ಮರ್ಯಾದೆ, ನೂತನ ಶಿಲಾಮಯ ದೇಗುಲದ ಪ್ರಾಸಾದ ಪರಿಗ್ರಹ, ಫಲಾನ್ಯಾಸ ಪೂರ್ವಕ ಸಾಮೂಹಿಕ ಶ್ರೀ ದೇವತಾ ಪ್ರಾರ್ಥನೆ, ಪುಣ್ಯಾಹ, ಪಂಚಗವ್ಯ, ದೇವನಾಂದಿ, ಮಹಾ ಸಂಕಲ್ಪ, ಕೃಚ್ಛಾ†ಚರಣೆ, ಆಚಾರ್ಯಾದಿ ಋತ್ವಿಕ ವರಣೆ, ಕಂಕಣಬಂಧ, ತೋರಣ ಸ್ಥಾಪನೆ, ಶ್ರೀ ದೇವರ ಉಗ್ರಾಣ ಮುಹೂರ್ತ, ಬ್ರಹ್ಮಕೂರ್ಚ ಹೋಮ, ಅಥರ್ವಶೀರ್ಷ ಮಹಾಗಣಪತಿ ಯಾಗ, ಮಧ್ಯಾಹ್ನ 1ರಿಂದ ಅನ್ನಸಂತರ್ಪಣೆ ನಡೆಯಿತು. ಅನ್ನ ಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ಸಂಜೆ 5ರಿಂದ ಸಪ್ತಶುದ್ಧಿ, ಪ್ರಾಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಾಸ್ತು ಬಲಿ, ಪ್ರಾಕಾರ ಬಲಿ, ಅಸ್ತ್ರಕಲಶ ಪ್ರತಿಷ್ಠೆ, ಅಂಕುರಾರ್ಪಣೆ, ಮಂಟಪ ಸಂಸ್ಕಾರ, ಕುಂಡ ಸಂಸ್ಕಾರ ಇತ್ಯಾದಿ ಪೂಜಾ ಕೈಂಕರ್ಯಗಳು ಜರಗಿದವು. ನೂತನ ಮಂದಿರದ ಕಾರ್ಯಾಧ್ಯಕ್ಷ ಚೆಲ್ಲಡ್ಕ ಕುಸುಮೋದರ ಡಿ. ಶೆಟ್ಟಿ, ಅಧ್ಯಕ್ಷ ಕಿಶೋರ್‌ ಕುಮಾರ್‌ ಎಂ. ಶೆಟ್ಟಿ, ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷ ಸಂಜೀವ ಎನ್‌. ಶೆಟ್ಟಿ, ಉಪಾಧ್ಯಕ್ಷ  ದಾಮೋದರ ಎಸ್‌. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸುಂದರ ಯು. ಪೂಜಾರಿ, ಗೌರವ ಕೋಶಾಧಿಕಾರಿ ಸುರೇಶ್‌ ಜಿ. ಶೆಟ್ಟಿ, ಜತೆ ಕಾರ್ಯದರ್ಶಿ ಹರಿ ಎಲ್‌. ಶೆಟ್ಟಿ, ಜತೆ ಕೋಶಾಧಿಕಾರಿ ರಾಜೇಂದ್ರ ಪ್ರಸಾದ್‌ ಮಾಡ, ವಿಶ್ವಸ್ತರಾದ ರವಿ ಆರ್‌. ಶೆಟ್ಟಿ, ರಿತೇಶ್‌ ಜಿ. ಕುರುಪು, ಡಾ| ಶಿವ ಮೂಡಿಗೆರೆ, ಪ್ರಕಾಶ್‌ ಮಹಾಡಿಕ್‌, ಖಾಂದೇಶ್‌ ಭಾಸ್ಕರ್‌ ಶೆಟ್ಟಿ, ಹರೀಶ್‌ ಎನ್‌. ಶೆಟ್ಟಿ, ಮಹೇಶ್‌ ಡಿ. ಪಟೇಲ್‌, ನರೇನ್‌ ಭಾç ಪಟೇಲ್‌ ಹಾಗೂ  ಸದಸ್ಯರಾದ  ರಾಮಕೃಷ್ಣ ಎಸ್‌. ಶೆಟ್ಟಿ, ಅಣ್ಣಪ್ಪ ಕೋಟೆಗಾರ್‌, ಸುರೇಂದ್ರ ಆರ್‌. ಶೆಟ್ಟಿ, ನಿತ್ಯಾನಂದ ವಿ. ಶೆಟ್ಟಿ, ಸದಾಶಿವ ಎನ್‌. ಶೆಟ್ಟಿ, ಮೋಹನ್‌ದಾಸ್‌ ಕೆ. ರೈ, ಮೇಘರಾಜ್‌ ಎಸ್‌. ಶೆಟ್ಟಿ, ಸುರೇಶ್‌ ಆರ್‌. ಶೆಟ್ಟಿ, ವಿಶ್ವನಾಥ ಡಿ. ಶೆಟ್ಟಿ, ಇಂದಿರಾ ಎಸ್‌. ಶೆಟ್ಟಿ, ರಘು ವಿ. ಶೆಟ್ಟಿ, ಹಾಗೂ ನೆರೂಲ್‌ ಶ್ರೀ ಮಣಿಕಂಠ ಸೇವಾ ಸಂಘ, ಧರ್ಮಶಾಸ್ತ ಭಕ್ತವೃಂದ ಚಾರಿಟೇಬಲ್‌ ಟ್ರಸ್ಟ್‌ ನವಿಮುಂಬಯಿ ಸರ್ವ ಪದಾಧಿಕಾರಿಗಳು, ಸದಸ್ಯರು, ಮಹಿಳಾ ವೃಂದದವರು ಪಾಲ್ಗೊಂಡು ಸಹಕರಿಸಿದರು. ನಗರದ ವಿವಿಧ ಜಾತೀಯ ಹಾಗೂ ಕನ್ನಡ-ತುಳುಪರ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಸಮಾಜ ಸೇವಕರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 

ಇಂದಿನ ಕಾರ್ಯಕ್ರಮ
ಜ. 17 ರಂದು ಬೆಳಗ್ಗೆ 8ರಿಂದ ಅರಣಿ ಮಥನ, ಭದ್ರದೀಪ ಪ್ರತಿಷ್ಠೆ, ಪೂರ್ಣ ನವಗ್ರಹಯಾಗ, ಸಂಜೀವಿನಿ ಮಹಾ ಮೃತ್ಯುಂಜಯ ಹೋಮ, ಬಿಂಬ ಶುದ್ಧಿ, ಸ್ನಪನ ಕಲಶ, ಬಿಂಬ ಶುದ್ಧಿ ಹೋಮ,  ಶಯ್ನಾಕಲ್ಪನಂ, ಮಧ್ಯಾಹ್ನ 1ರಿಂದ ಅನ್ನಸಂತರ್ಪಣೆ, ಸಂಜೆ 5ರಿಂದ ಶಿರ ತ್ತತ್ವ ಹೋಮ, ಭದ್ರಕ ಮಂಡಲ ಪೂಜೆ, ಅಧಿ ವಾಸ ಹೋಮಗಳು, ಶಯ್ನಾಧಿವಾಸ, ಅಷ್ಟ ಬಂಧಾಫಿವಾಸ, ನೂತನ ಪ್ರಸಾದಾಧಿವಾಸ ನಡೆಯಲಿದೆ.

  ವರದಿ: ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

Advertisement
Advertisement

Udayavani is now on Telegram. Click here to join our channel and stay updated with the latest news.

Next