Advertisement

ನೆರೂಲ್‌ ಶ್ರೀ ಅಯ್ಯಪ್ಪ ಭಕ್ತವೃಂದ ಚಾರಿಟೆಬಲ್‌ ಟ್ರಸ್ಟ್‌: ಮಹಾಪೂಜೆ

12:46 PM Jan 06, 2019 | Team Udayavani |

ನವಿಮುಂಬಯಿ: ನೆರೂಲ್‌ ಶ್ರೀ ಶನೀಶ್ವರ ಮಂದಿರದ ಶ್ರೀ ಅಯ್ಯಪ್ಪ ಭಕ್ತವೃಂದ ಚಾರಿಟೆಬಲ್‌ ಟ್ರಸ್ಟ್‌  ಇದರ 26 ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆಯು ಜ. 4 ಮತ್ತು ಜ. 5 ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳ ಕಾಲ ಅದ್ದೂರಿಯಾಗಿ ಜರಗಿತು.

Advertisement

ಧಾರ್ಮಿಕ ಕಾರ್ಯಕ್ರಮವಾಗಿ ಜ. 4 ರಂದು ಮುಂಜಾನೆ 6 ರಿಂದ ಶ್ರೀ ಮಹಾಗಣಪತಿ ಹೋಮ, ಬೆಳಗ್ಗೆ 8.30 ರಿಂದ ಶ್ರೀ ಅಯ್ಯಪ್ಪ ಸ್ವಾಮಿ ಸಹಸ್ರ ನಾಮಾರ್ಚನೆ, ಸಂಜೆ 5 ರಿಂದ ಕಲಶ ಪ್ರತಿಷ್ಠೆ, ಸಂಜೆ 5.30 ರಿಂದ ಭಜನೆ, ರಾತ್ರಿ 8.15 ರಿಂದ ಶ್ರೀ ಶನಿಮಂದಿರದಲ್ಲಿ ಆರತಿ, ರಾತ್ರಿ 8.30 ರಿಂದ ಶ್ರೀ ಸ್ವಾಮಿಯ ಮಹಾಆರತಿ, ರಾತ್ರಿ 9 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅನ್ನ ಪ್ರಸಾದ ಸ್ವೀಕರಿಸಿದರು.

ಇದೇ ಸಂದರ್ಭದಲ್ಲಿ ಭವಾನಿ ಫೌಂಡೇಷನ್‌ ಮುಂಬಯಿ ಇದರ ಸ್ಥಾಪಕಾಧ್ಯಕ್ಷ, ಭವಾನಿ ಶಿಪ್ಪಿಂ ಗ್‌ ಸಂಸ್ಥೆಯ ಕಾರ್ಯಾಧ್ಯಕ್ಷ ಕೆ. ಡಿ. ಶೆಟ್ಟಿ ಅವರನ್ನು ಸಮಿತಿಯ ವತಿಯಿಂದ ಮಹಾಪ್ರಸಾದವನ್ನಿತ್ತು ಸಮಿತಿಯ ಪದಾಧಿಕಾರಿಗಳ ಸಮ್ಮುಖದಲ್ಲಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ನೆರೂಲ್‌ ಶ್ರೀ ಶನೀಶ್ವರ ಮಂದಿರದ ಗೌರವಾಧ್ಯಕ್ಷ ಸಂತೋಷ್‌ ಶೆಟ್ಟಿ, ಅಧ್ಯಕ್ಷ ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ನಗರ ಹಾಗೂ ಉಪನಗರಗಳ ವಿವಿಧ ಅಯ್ಯಪ್ಪ ಮಂಡಲಗಳ ವೃತಧಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ದಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಸಮಾಜ ಸೇವಕರು ಉಪಸ್ಥಿತರಿದ್ದರು. ಗಣ್ಯರನ್ನು ಪ್ರಸಾದವನ್ನಿತ್ತು ಗೌರವಿಸಲಾಯಿತು. ಜ. 5ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1ರವರೆಗೆ ಭಜನಾಮೃತ ಹಾಗೂ ಅಪರಾಹ್ನ 3.30ರಿಂದ ಸಂಜೆ 6.30 ರವರೆಗೆ ಭಜನಾಮೃತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ನೆರೂಲ್‌ ಶ್ರೀ ಶನೀಶ್ವರ ಮಂದಿರದ ಶ್ರೀ ಅಯ್ಯಪ್ಪ ಭಕ್ತವೃಂದ ಚಾರಿಟೇಬಲ್‌ ಟ್ರಸ್ಟ್‌  ಇದರ ವಿಶ್ವಸ್ಥ ಮಂಡಳಿಯ ಕಾರ್ಯಾಧ್ಯಕ್ಷ ಅನಿಲ್‌ ಕುಮಾರ್‌ ಹೆಗ್ಡೆ, ಉಪ ಕಾರ್ಯಾಧ್ಯಕ್ಷ ಪ್ರಭಾಕರ ಎಸ್‌. ಹೆಗ್ಡೆ, ಗೌರವ ಪ್ರಧಾನ ಕಾರ್ಯದರ್ಶಿ ವಿ. ಕೆ. ಸುವರ್ಣ, ಗೌರವ ಕೋಶಾಧಿಕಾರಿ ವಿಶ್ವನಾಥ ಕೆ. ಪೂಜಾರಿ, ವಿಶ್ವಸ್ಥರುಗಳಾದ ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ, ಕರುಣಾಕರ ಎಸ್‌. ಆಳ್ವ, ಕೃಷ್ಣ ಎಂ. ಪೂಜಾರಿ, ಎನ್‌. ಕೆ. ಪೂಜಾರಿ, ಗಿರೀಶ್‌ ಸಿ. ಶೆಟ್ಟಿ, ವಿಜಯ ಶೆಟ್ಟಿ, ವಿನೋದ್‌ ರಾವ್‌ ಹಾಗೂ ಸರ್ವ ಸದಸ್ಯರು ಮತ್ತು ಸ್ವಾಮಿಗಳು, ಉಪ  ಸಮಿತಿಯ ಸಂಚಾಲಕ ಲಕ್ಷ್ಮೀ ನಾರಾ ಯಣ ಬಂಗೇರ, ಮಹಿಳಾ ವಿಭಾಗ ದ ಅಧ್ಯಕ್ಷೆ ವೀಣಾ ವಿ. ಪೂಜಾರಿ ಉಪಸ್ಥಿತಿ ಯಲ್ಲಿ,  ಶ್ರೀ ಶನೀಶ್ವರ ಸೇವಾ ಸಮಿತಿಯ ವಿಶ್ವಸ್ಥ ಮಂಡಳಿಯ ಸಹಕರಾದೊಂದಿಗೆ ಕಾರ್ಯಕ್ರಮವು ಜರಗಿತು.

Advertisement

ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು, ಅಯ್ಯಪ್ಪ ವೃತಧಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕಳೆದ 25 ವರ್ಷಗಳಿಂದ ನೆರೂಲ್‌ ಶ್ರೀ ಶನೀಶ್ವರ ಮಂದಿರದಲ್ಲಿ ಮಾಲಾಧಾರಣೆ ಮಾಡಿ ಶ್ರೀ ಅಯ್ಯಪ್ಪ ಸ್ವಾಮಿಯ ವೃತಾಚರಣೆಗೈದು ಶಬರಿಮಲೆ ಯಾತ್ರೆ ಮಾಡಿ ಕೃತಾರ್ಥರಾದ ಸ್ವಾಮಿಗಳು ಪ್ರಸ್ತುತ 26 ನೇ ವರ್ಷದ ಮಹಾಪೂಜೆಯನ್ನು ಆಯೋಜಿಸಿದ್ದು, ಎರಡು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. 

ಚಿತ್ರ-ವರದಿ : ಸುಭಾಶ್‌ ಶಿರಿಯಾ

Advertisement

Udayavani is now on Telegram. Click here to join our channel and stay updated with the latest news.

Next