Advertisement

ನೆರೂಲ್‌ ಶ್ರೀ ಕ್ಷೇತ್ರ:ಶರನ್ನವರಾತ್ರಿ

03:54 PM Sep 13, 2017 | |

ನವಿಮುಂಬಯಿ: ನೆರೂಲ್‌ನಲ್ಲಿ  ನಿರ್ಮಾಣ ಗೊಂಡಿರುವ ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಕ್ಷೇತ್ರದಲ್ಲಿ ಶರನ್ನವರಾತ್ರಿಯ ನಿಮಿತ್ತ ವಿಶೇಷ ಕಾರ್ಯಕ್ರಮಗಳು ಸೆ. 21 ರಿಂದ ಸೆ. 30ರ ವರೆಗೆ  ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮಂದಿರದ ಪ್ರಧಾನ ಅರ್ಚಕರಾದ ಶ್ರೀಕೃಷ್ಣ ಭಟ್‌ ಅವರ ಮುಂದಾಳತ್ವದಲ್ಲಿ ಹಾಗು ತಂತ್ರಿಗಳಾದ ಶ್ರೀ ರಾಮಚಂದ್ರ ಬಾಯಾರಿ ಅವರ ಮಾರ್ಗದರ್ಶನದಲ್ಲಿ ನಡೆಯಲಿವೆ.

Advertisement

ಧಾರ್ಮಿಕ ಕಾರ್ಯಕ್ರಮವಾಗಿ ಸೆ. 21 ರಂದು ಮುಂಜಾನೆ  6 ರಿಂದ ನೈರ್ಮಲ್ಯ ದರ್ಶನ, ಕ್ಷೀರಾಭಿಷೇಕ, ಮಹಾಮಂಗಳಾರತಿ, ಪೂರ್ವಾಹ್ನ  9ರಿಂದ ಪ್ರಾರ್ಥನೆ, ತೋರಣ ಮುಹೂರ್ತ, ಮಹಾ ಸಂಕಲ್ಪ, ಸಂಜೆ 5.30ರಿಂದ ದುರ್ಗಾ ಸಪ್ತಶತೀ ಪಾರಾಯಣ, ಲಲಿತ ಸಹಸ್ರನಾಮ ಪಾರಾಯಣ,  ಸಹಸ್ರ ಕಲಾವೃಂದ ಸೀವುಡ್‌ ಇವರಿಂದ ಭಜನೆ, ಮಹಾ ಮಂಗಳಾರತಿ ಅನ್ನಪ್ರಸಾದ ನಡೆಯಲಿದೆ.

ಸೆ. 22ರಂದು ಮುಂಜಾನೆಯಿಂದ ನೈರ್ಮಲ್ಯ ದರ್ಶನ, ಕ್ಷೀರಾಭಿಷೇಕ, ಮಂಗಳಾರತಿ, ಸಂಜೆ 5.30ರಿಂದ ದುರ್ಗಾ ಸಪ್ತಶತೀ ಪಾರಾಯಣ, ಲಲಿತ ಸಹಸ್ರನಾಮ ಪಾರಾಯಣ, ರಾತ್ರಿ  7ರಿಂದ ಸುರೇಶ್‌ ಶೆಟ್ಟಿ, ನ್ಯೂ ಪನ್ವೇಲ್‌ ಮತ್ತು ಬಳಗದವರಿಂದ ಭಜನೆ, ಮಹಾ ಮಂಗಳಾರತಿ ತದನಂತರ ಅನ್ನಪ್ರಸಾದ ಜರಗಲಿದೆ.

 ಸೆ. 23 ರಂದು ಮುಂಜಾನೆ 6 ರಿಂದ ನೈರ್ಮಲ್ಯ ದರ್ಶನ, ಕ್ಷೀರಾಭಿಷೇಕ, ಬೆಳಗ್ಗೆ 7.30  ರಿಂದ ಮಂಗಳಾರತಿ, ಸಂಜೆ 5.30 ರಿಂದ ದುರ್ಗಾ ಸಪ್ತಶತೀ ಪಾರಾಯಣ, ಲಲಿತ ಸಹಸ್ರನಾಮ ಪಾರಾಯಣ, ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಭಜನಾ ಮಂಡಳಿಯವರಿಂದ ಭಜನೆ, ಮಹಾ ಮಂಗಳಾರತಿ ತದನಂತರ ಅನ್ನಪ್ರಸಾದ ಜರಗಲಿದೆ.

ಸೆ. 24ರಂದು ಬೆಳಗ್ಗೆ  6ರಿಂದ ನೈರ್ಮಲ್ಯ ದರ್ಶನ,  ಕ್ಷೀರಾಭಿಷೇಕ, ಮಂಗಳಾರತಿ, ಸಂಜೆ 5.30ರಿಂದ ದುರ್ಗಾ ಸಪ್ತಶತೀ ಪಾರಾಯಣ, ಸಂಜೆ 6.30ರಿಂದ ಲಲಿತ ಸಹಸ್ರನಾಮ ಪಾರಾಯಣ,  ರಾಮ ಭಜನಾ ಮಂಡಳಿ ಮುಂಬಯಿ ಅವರಿಂದ ಭಜನೆ, ಮಹಾ ಮಂಗಳಾರತಿ ತದನಂತರ ಅನ್ನಪ್ರಸಾದವನ್ನು ಆಯೋಜಿಸಲಾಗಿದೆ. ಸೆ. 25ರಂದು  ಬೆಳಗ್ಗೆ  6 ರಿಂದ ನೈರ್ಮಲ್ಯ ದರ್ಶನ , ಕ್ಷೀರಾಭಿಷೇಕ, ಮಂಗಳಾರತಿ, ಸಂಜೆ 5.30ರಿಂದ ದುರ್ಗಾ ಸಪ್ತಶತೀ ಪಾರಾಯಣ, ಲಲಿತ ಸಹಸ್ರನಾಮ ಪಾರಾಯಣ, ಮಹಾಕಾಳೇಶ್ವರ ಭಜನಾ ಮಂಡಳಿ, ಶಿರೋನೆಯವರಿಂದ ಭಜನೆ, ಮಹಾ ಮಂಗಳಾರತಿ ತದನಂತರ ಅನ್ನಪ್ರಸಾದ ಜರಗಲಿದೆ.

Advertisement

ಸೆ. 26ರಂದು ಬೆಳಗ್ಗೆ  6ರಿಂದ ನೈರ್ಮಲ್ಯ ದರ್ಶನ, ಕ್ಷೀರಾಭಿಷೇಕ, ಮಂಗಳಾರತಿ, ಬೆಳಗ್ಗೆ 8.30ರಿಂದ ಪ್ರಾರ್ಥನೆ, ಸಂಕಲ್ಪ, ಪುಣ್ಯಾಹ ವಾಚನ, ಬೆಳಗ್ಗೆ 9ರಿಂದ ಚಂಡಿಕಾ ಹೋಮ, ಪೂರ್ಣಾಹುತಿ, ಪೂರ್ವಾಹ್ನ 11.45ಕ್ಕೆ ಸುಹಾಸಿನಿ ಪೂಜೆ, ಕನ್ನಿಕಾ ಪೂಜೆ, ಮಧ್ಯಾಹ್ನ 12ರಿಂದ  ಮಂಗಳಾರತಿ, ಪ್ರಸಾದ ವಿತರಣೆ, ಅನ್ನ ಪ್ರಸಾದ ನೆರವೇರಲಿದೆ. ಸಂಜೆ  5ರಿಂದ ಹರಿದ್ರಾ ಅಲಂಕಾರ, ದುರ್ಗಾ ಸಪ್ತಶತೀ ಪಾರಾಯಣ, ಸಂಜೆ 6.30ರಿಂದ ಲಲಿತ ಸಹಸ್ರನಾಮ ಪಾರಾಯಣ, ಶ್ರೀ ಗಣಪತಿ ಅಯ್ಯಪ್ಪ ದುರ್ಗಾದೇವಿ ಭಜನಾ ಮಂಡಳಿಯವರಿಂದ ಭಜನೆ, ಮಹಾ ಮಂಗಳಾರತಿ ತದನಂತರ ಅನ್ನಪ್ರಸಾದವನ್ನು ಆಯೋಜಿಸಲಾಗಿದೆ.

ಸೆ. 27 ರಂದು ಬೆಳಗ್ಗೆ   6ರಿಂದ ನೈರ್ಮಲ್ಯ ದರ್ಶನ, ಕ್ಷೀರಾಭಿಷೇಕ, ಮಂಗಳಾರತಿ, ಸಂಜೆ 5.30 ರಿಂದ ದುರ್ಗಾ ಸಪ್ತಶತೀ ಪಾರಾಯಣ, 6.30ರಿಂದ ಲಲಿತ ಸಹಸ್ರನಾಮ ಪಾರಾಯಣ, ಸಂಜೆ  7ರಿಂದ  ಖಾಂದೇಶ್ವರ ಭಜನಾ ಮಂಡಳಿ ಖಾಂದ ಕಾಲನಿಯವರಿಂದ ಭಜನೆ, 8.30 ಮಹಾ ಮಂಗಳಾರತಿ ತದನಂತರ ಅನ್ನಪ್ರಸಾದ ಜರಗಲಿವೆೆ. 

ಸೆ. 28ರಂದು ಬೆಳಗ್ಗೆ  6ರಿಂದ ನೈರ್ಮಲ್ಯ ದರ್ಶನ, 6.30ರಿಂದ  ಕ್ಷೀರಾಭಿಷೇಕ, ಮಂಗಳಾರತಿ, ಸಂಜೆ 5.30ರಿಂದ ದುರ್ಗಾ ಸಪ್ತಶತೀ ಪಾರಾಯಣ, 6.30ರಿಂದ ಲಲಿತ ಸಹಸ್ರನಾಮ ಪಾರಾಯಣ,  ಸಂಜೆ 7ರಿಂದ ಹರಿ ಕೃಷ್ಣ ಭಜನಾ ಮಂಡಳಿ ಆಶ್ರಯದವರಿಂದ ಭಜನೆ, ಮಹಾ ಮಂಗಳಾರತಿ ತದನಂತರ ಅನ್ನಪ್ರಸಾದವನ್ನು ಆಯೋಜಿಸಲಾಗಿದೆ.

ಸೆ. 29ರಂದು ಬೆಳಗ್ಗೆ  6ರಿಂದ ನೈರ್ಮಲ್ಯ ದರ್ಶನ, ಕ್ಷೀರಾಭಿಷೇಕ, ಮಂಗಳಾರತಿ, ಪೂರ್ವಾಹ್ನ  9.30ರಿಂದ ಪ್ರಾರ್ಥನೆ, ಸಂಕಲ್ಪ, ಪುಣ್ಯಾಹ ವಾಚನ, ಪೂರ್ವಾಹ್ನ 10 ರಿಂದ ದುರ್ಗಾ ಹೋಮ, ಪೂರ್ವಾಹ್ನ  11.30 ಪೂರ್ಣಾಹುತಿ, 11.45ಕ್ಕೆ ಮಂಗಳಾರತಿ, ಮಧ್ಯಾಹ್ನ 12.00ಕ್ಕೆ ಪ್ರಸಾದ ವಿತರಣೆ, ಸಂಜೆ 5.30ರಿಂದ ದುರ್ಗಾ ಸಪ್ತಶತೀ ಪಾರಾಯಣ, 6.30 ರಿಂದ ಲಲಿತ ಸಹಸ್ರನಾಮ ಪಾರಾಯಣ, 7 ರಿಂದ  ಶ್ರೀ  ಗಣಪತಿ ಅಯ್ಯಪ್ಪ ದುರ್ಗಾದೇವಿ ಭಜನಾ ಮಂಡಳಿಯವರಿಂದ ಭಜನೆ, ಮಹಾ ಮಂಗಳಾರತಿ, ದಾಂಡಿಯಾ ನೃತ್ಯ ತದನಂತರ ಅನ್ನಪ್ರಸಾದ ಜರಗಲಿದೆ.

ಸೆ. 30 ರಂದು ಬೆಳಗ್ಗೆ  9 ರಿಂದ ಶಾರದಾ ಪೂಜೆ, ಪೂರ್ವಾಹ್ನ 10 ರಿಂದ ಅಕ್ಷರಾಭ್ಯಾಸ, ಪೂರ್ವಾಹ್ನ 11 ರಿಂದ ಆಯುಧ ಪೂಜೆ, ಅನ್ನದಾನ ನಡೆಯಲಿದೆ. ವಿಶೇಷ ಪೂಜೆಗಳನ್ನು ನೀಡಲಿಚ್ಚಿಸುವ ಭಕ್ತಾದಿಗಳು ಮಂದಿರದ ಸಂಬಂಧಪಟ್ಟವರನ್ನು (9820313827, 9833284044, 9004256777) ಸಂಪರ್ಕಿಸ ಬಹುದು. ಹತ್ತು ದಿನ ನಡೆಯುವ  ಈ ಎಲ್ಲಾ ಕಾರ್ಯಕ್ರಮದಲ್ಲೂ ಭಕ್ತಾದಿಗಳು ಪಾಲ್ಗೊಂಡು  ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮಂದಿರದ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next