Advertisement

Nethravathi River: ಅಪಾಯದ ಮಟ್ಟ ಮೀರಿದ ನೇತ್ರಾವತಿ; ಬಂಟ್ವಾಳದ ಹಲವೆಡೆ ಮನೆಗಳಿಗೆ ನೀರು

01:57 PM Jul 30, 2024 | Team Udayavani |

ಬಂಟ್ವಾಳ: ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಬಂಟ್ವಾಳ ತಾಲೂಕಿನ ನದಿ ತೀರದ ಸಾಕಷ್ಟು ಮನೆಗಳು ಮುಳುಗಡೆಯಾಗಿದೆ. ತಾಲೂಕಿನ ಪಾಣೆಮಂಗಳೂರು, ಬಂಟ್ವಾಳ, ನಾವೂರು, ಸರಪಾಡಿ, ಮಣಿನಾಲ್ಕೂರು ಗ್ರಾಮಗಳಲ್ಲಿ ಕೃಷಿ ತೋಟಗಳು, ಗದ್ದೆಗಳು ಮುಳುಗಡೆಯಾಗಿದೆ.

Advertisement

ಬಂಟ್ವಾಳ- ಜಕ್ರಿಬೆಟ್ಟು ರಸ್ತೆಯ ಕೋಟೆಕಣಿ, ಬಿ.ಸಿ.ರೋಡಿನ ಬಸ್ತಿಪಡ್ಪು, ಆಲಡ್ಕ ಪ್ರದೇಶ ಮೊದಲಾದ ಪ್ರದೇಶದಲ್ಲಿ ರಸ್ತೆಗೆ ನೀರು ಬಿದ್ದು ಸಂಚಾರ ಕಡಿತಗೊಂಡಿದೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಧಾರಾಕಾರ ಮಳೆಗೆ ಬಿ.ಸಿ.ರೋಡು- ಪೊಳಲಿ ರಸ್ತೆಯ ಅಮ್ಟಾಡಿ ಬಳಿ ಗುಡ್ಡ ಕುಸಿತ:

Advertisement

ಬಂಟ್ವಾಳ: ಧಾರಾಕಾರ ಮಳೆಯ ಪರಿಣಾಮ ಬಿ.ಸಿ.ರೋಡು- ಪೊಳಲಿ ರಸ್ತೆಯ ಅಮ್ಟಾಡಿ ಬಳಿ ಗುಡ್ಡ ಕುಸಿದು ರಸ್ತೆ ಸಂಚಾರ ಕಡಿತಗೊಂಡಿದೆ. ಬಿ.ಸಿ.ರೋಡು- ಪುಂಜಾಲಕಟ್ಟೆಯ ಹಲವೆಡೆ ಮಣ್ಣು ಕುಸಿದು ಹೆದ್ದಾರಿ ಬಿದ್ದಿದೆ.

ಮಾವಿನಕಟ್ಟೆ- ಅಜಿಲಮೊಗರು ರಸ್ತೆಯಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ಮಣಿನಾಲ್ಕೂರು ಗ್ರಾಮದ ಡೆಚ್ಚಾರ್ ಬಳಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿರುವ ಜತೆಗೆ ಕೃಷಿ ಭೂಮಿಗೆ ಮಣ್ಣು ಬಿದ್ದಿದೆ.

Advertisement

Udayavani is now on Telegram. Click here to join our channel and stay updated with the latest news.

Next