Advertisement

ಆನ್ ಲೈನ್ ತರಗತಿಗೆ ಸಿಗದ ನೆಟ್ವರ್ಕ್: ಗುಡ್ಡದ ಮೇಲೆ ಟೆಂಟ್ ಹಾಕಿದ ವಿದ್ಯಾರ್ಥಿಗಳು

09:19 PM Aug 07, 2021 | Team Udayavani |

ಪಣಜಿ: ರಾಜ್ಯದಲ್ಲಿ ಕೋವಿಡ್ ಭೀತಿ ಇನ್ನೂ ಮುಗಿದಿಲ್ಲ. ಇದರಿಂದಾಗಿ ಶಾಲೆ ಆರಂಭಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆನ್‍ಲೈನ್ ತರಗತಿಗಳು ಮುಂದುವರೆದಿದೆ. ಆದರೆ, ಗ್ರಾಮೀಣ ಭಾಗದಲ್ಲಿ ಮೊಬೈಲ್ ನೆಟ್‍ವರ್ಕ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಗುಡ್ಡ ಏರಿ ಕುಳಿತುಕೊಳ್ಳುವಂತಾಗಿದೆ.

Advertisement

ಗೋವಾದ ವಾಳಪೈ, ಸಾಂಗೆ, ಸಾವರ್ಡೆ, ನೇತ್ರಾವಳಿ, ಭಾಗದಲ್ಲಿ ಮೊಬೈಲ್ ನೆಟ್‍ವರ್ಕ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳಿಗೆ ಹೆಚ್ಚಿನ ತೊಂದರೆಯುಂಟಾಗುವಂತಾಗಿದೆ. ನೆಟ್‍ವರ್ಕ ಸಮಸ್ಯೆಯಿರುವ ಗ್ರಾಮೀಣ ಭಾಗಗಳಲ್ಲಿ ಸ್ಥಳೀಯರೇ ವಿದ್ಯಾರ್ಥಿಗಳಿಗಾಗಿ ಗುಡ್ಡದ ಮೇಲೆ ಟೆಂಟ್ ನಿರ್ಮಾಣ ಮಾಡಿದ್ದಾರೆ.

ನೆಟ್‍ವರ್ಕ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮೀಣ ಭಾಗದ ಜನರಿಂದ ಆಗ್ರಹ ವ್ಯಕ್ತವಾಗಿದೆ.

ಎರಡನೇ ಅಲೆ ಕೊಂಚ ಕಡಿಮೆಯಾಗಿದೆ ಎಂದು ನಿಟ್ಟುಸಿರು ಬಿಡುತ್ತಿದ್ದ ಜನರಿಗೆ ಮೂರನೇ ಅಲೆಯ ಆತಂಕ ಶುರುವಾಗಿದೆ. ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚ ತೊಡಗಿದೆ.ಇನ್ನು ಇದೇ ಸಮಸ್ಯೆ ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿಯ ವಿದ್ಯಾರ್ಥಿಗಳೂ ಎದುರಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next